ಉಪ್ಪಳ: ಉಪ್ಪಳ ಮೊಗರ್ ಐತಿಹಾಸಿಕ ಖಿಳ್ರ್ ಜುಮಾ ಮಸೀದಿಯಲ್ಲಿ ರಿಫಾಯಿ ದಫ್ ರಾತಿಬ್ ಇದರ ಸುವರ್ಣ ಮಹೋತ್ಸವ ಸಂಭ್ರಮ ಹಾಗೂ 6 ದಿವಸಗಳ ಮತ ಪ್ರಭಾಷಣೆ ನಡೆಯಲಿದೆ.

ವರ್ಷಕ್ಕೊಮ್ಮೆ ನಡೆಸಿಕೊಂಡು ಬರುವ ರಿಫಾಯಿ ದಫ್ ರಾತಿಬ್ ನೇರ್ಚೆಯ 50 ನೇ ವಾರ್ಷಿಕೋತ್ಸವ ಅಂಗವಾಗಿ 6 ದಿವಸಗಳ ಮತ ಪ್ರವಚನ ಕಾರ್ಯಕ್ರಮ 2019 ಎಪ್ರಿಲ್ 1 ರಿಂದ 6 ರ ತನಕ ರಾತ್ರಿ 8 ಗಂಟೆಗೆ ನಡೆಯಲಿದೆ. ಎಪ್ರಿಲ್ 1 ಸೋಮವಾರ ಬೆಳಿಗ್ಗೆ 8 ಗಂಟೆಗೆ ಸ್ಥಳೀಯ ಖತೀಬ್ ಅಬೂಬಕ್ಕರ್ ಹನೀಫಿ ಇವರ ದುಆದೊಂದಿಗೆ ಕೆಜೆಎಂ ಅಧ್ಯಕ್ಷರು ಮಹಮ್ಮದ್ ಕುಞ್ಞಿ ಹಾಜಿಯವರು ಹಾಗೂ ಕಾರ್ಯದರ್ಶಿ ಸತ್ತಾರ್ ಹಾಜಿ ಮಾಕಾಳಿ ಧ್ವಜಾರೋಹಣ ನಡೆಸಿ ಐತಿಹಾಸಿಕ ಸುವರ್ಣ ಮಹೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಿದ್ದಾರೆ.
ರಾತ್ರಿ 8 ಗಂಟೆಗೆ ಸಯ್ಯಿದ್ ಹನೀಫ್ ತಂಙಳ್ ರವರ ದುಆ ದೊಂದಿಗೆ ಚಾಲನೆಗೊಳ್ಳಲಿರುವ ಸಭಾಕಾರ್ಯಕ್ರಮದಲ್ಲಿ ಸಯ್ಯಿದ್ ಅಲಿ ತಂಙಳ್ ಕುಂಬೋಲ್ 50 ನೇ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಉದ್ಘಾಟನೆಗೆಯ್ಯಲಿದ್ದಾರೆ. ಹಲವಾರು ಸಾದಾತುಗಳು ಉಲಮಾಗಳು ಭಾಗವಹಿಸಿ ಈ ಐತಿಹಾಸಿಕ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಭಾಷಣಗೆಯ್ಯಲಿದ್ದಾರೆ.
ಎಪ್ರಿಲ್ 6 ಶನಿವಾರ ರಾತ್ರಿ 8 ಗಂಟೆಗೆ ಸೈಯದ್ ಅತಾವುಲ್ಲ ತಂಙಳ್ ಉದ್ಯಾವರ ಮತಪ್ರವಚನ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ತನ್ನ ದುಆದ ಮೂಲಕ ಮುಕ್ತಾಯಗೊಳಿಸಿಲಿದ್ದಾರೆ. ಆದಿತ್ಯವಾರ ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಬಹು ಮೂಸಾ ದಫ್ ಉಸ್ತಾದರ ನೇತೃತ್ವದಲ್ಲಿ ದಫ್ ರಾತಿಬ್ ನೊಂದಿಗೆ ಸುವರ್ಣ ಮಹೋತ್ಸವವು ಸಮಾಪ್ತಿಗೊಳ್ಳಲಿದೆ.
ವರದಿ : ಹಫೀಝ್ ಇಸ್ಮಾಯಿಲ್ ಕೆ.ಸಿ ರೋಡ್
ಮೀಡಿಯಾ ಟೀಮ್ ಖಿದ್ಮತುಲ್ ಇಸ್ಲಾಮ್ ಫೌಂಢೇಷನ್















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್