ಮಂಗಳೂರು: ಲೋಕಸಭೆ ಚುನಾವಣೆಗೆ ಇನ್ನೇನು ಎರಡು ವಾರಗಳು ಬಾಕಿಯಿವೆ. ಈ ಮಹಾ ಸಮರವನ್ನು ಎದುರಿಸಲು ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಸಜ್ಜಾಗಿವೆ. ಕರ್ನಾಟಕದಲ್ಲೀಗ ಕಾಲಿಗೆ ಚಕ್ರ ಕಟ್ಟಿಕೊಂಡು ಚುನವಾಣೆ ಗೆಲ್ಲಲೆಂದು ಅಭ್ಯರ್ಥಿಗಳು ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಈ ಮಧ್ಯೆ ಮಂಡ್ಯದಂತೆಯೇ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡುತ್ತಿದೆ.
ಇಲ್ಲಿನ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿದಿರುವ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಅಗ್ನಿ ಪರೀಕ್ಷೆಗೆ ಮುಂದಾಗಿದ್ಧಾರೆ. ಈ ನಡುವೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಟೀಲ್ ವಿರುದ್ಧ ಸ್ಪರ್ಧಿಸುತ್ತಿರುವ ಮಿಥುನ್ ರೈ ಕೇಸರಿ ಶಾಲು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬೆನ್ನಲ್ಲೇ ಮಿಥುನ್ ರೈ ಪ್ರಚಾರದ ಶೈಲಿಗೆ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರ ಜತೆ ಮಾತಾಡಿದ ಮಾಜಿ ಡಿಸಿಎಂ ಆರ್. ಅಶೋಕ್ ಅವರು, ಕಾಂಗ್ರೆಸ್ ನಾಟಕ ಕಂಪನಿ ಇದ್ದಹಾಗೇ. ಕೇಸರಿ ಶಾಲು ಹಾಕಿದ ಕೂಡಲೇ ಜನ ನಿಮಗೆ ವೋಟ್ ಹಾಕಲ್ಲ. ಕೇಸರಿ ಶಾಲಿಗೆ ತನ್ನದೇ ಆದ ಮಹತ್ವ ಇದೆ. ಚುನಾವಣೆಯಲ್ಲಿ ಗೆಲ್ಲಲು ಮತದಾರರನ್ನು ಸೆಳೆಯಲು ತೋರಿಕೆಗೆ ಕೇಸರಿ ಶಾಲು ಹಾಕಿದರು, ಜನ ಬಿಜೆಪಿಯನ್ನೇ ಗೆಲ್ಲಿಸುತ್ತಾರೆ ಎಂದು ಮಿಥುನ್ ರೈ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್