ಕುವೈಟ್ ಸಿಟಿ: ಕುವೈಟಿನ ಪ್ರಧಾನಿ ಮತ್ತು ಇತರ ಮಂತ್ರಿಗಳು ಸ್ವದೇಶೀಗಳಿಗೆ ಉದ್ಯೋಗವನ್ನು ಖಾತ್ರಿಪಡಿಸಿಕೊಳ್ಳಲು ವಿಫಲರಾಗಿದ್ದು, ಅವರ ವಿಚಾರಣೆ ನಡೆಸಬೇಕಿದೆ ಎಂದು ಸಂಸತ್ ಸದಸ್ಯ ಉಮರ್ ಅಲ್ ಥಬೀಬಿ ಒತ್ತಾಯಿಸಿದ್ದಾರೆ. ನೂರಾರು ಸ್ಥಳೀಯ ಇಂಜಿನಿಯರ್ಗಳು ಪೆಟ್ರೋಲಿಯಂ ವಲಯದಲ್ಲಿ ನಿರುದ್ಯೋಗಿಗಳಾಗಿದ್ದಾರೆ. ಆ ವಲಯದಲ್ಲಿ ವಲಸಿಗರನ್ನು ಬದಿಗಿಟ್ಟು ಸ್ವದೇಶೀಯರನ್ನು ನೇಮಕಗೊಳಿಸುವಂತೆ ಅವರು ಒತ್ತಾಯಿಸಿದರು.
ವಲಸಿಗರ ಮೌಲ್ಯಮಾಪನ ಮಾಡ ಬೇಕಾಗಿದ್ದರೆ ಅದು ಕುವೈತಿಗಳ ಖರ್ಚಿನಲ್ಲಿ ಮಾಡಬಾರದು. ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಮೂಲ ನಿವಾಸಿಗಳಿಗೆ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ನೀಡಬೇಕು. ಕುವೈತೀ ವಿದ್ಯಾರ್ಥಿಗಳಿಗೆ ಖಾಸಗಿ ವಲಯದಲ್ಲಿ ಅಗತ್ಯವಿಲ್ಲದ ಕೆಲವು ಕೋರ್ಸ್ ಗಳನ್ನು ಕಲಿಸಲಾಗುತ್ತಿದೆ. ಕಲಿತ ನಂತರ ಅವರು ನಿರುದ್ಯೋಗಿಗಳಾಗುತ್ತಾರೆ.ಅವರ ಉದ್ಯೋಗಗಳನ್ನು ವಲಸಿಗರು ಪಡೆಯುತ್ತಾರೆ ಎಂದು ಆರೋಪಿಸಿದರು.
ದಿನನಿತ್ಯದ ಆಧಾರದ ಮೇಲೆ ಮತ್ತು ಒಪ್ಪಂದದ ಆಧಾರದ ಮೇಲೆ ಸರಕಾರ ನೇಮಕಗೊಳಿಸಿದ ವಲಸಿಗರ ಸಂಖ್ಯೆಯನ್ನು ನೀಡುವಂತೆ ಕೋರಿದ್ದೇನೆ ಎಂದ ಅವರು, ಶಾಶ್ವತ ಉದ್ಯೋಗಿಗಳ ಪಟ್ಟಿಯಲ್ಲಿ ಸೇರದವರ ಪಟ್ಟಿಯನ್ನು ಕೇಳಲಾಗಿದೆ ಎಂದರು. ಪೆಟ್ರೋಲಿಯಂ ಇಂಜಿನಿಯರ್ ಆಗಿ ಕೆಲಸಮಾಡಲು ಸ್ವದೇಶಿಗಳಿಗೆ ಉಪಯುಕ್ತವಾಗುವಂತೆ ಉದ್ಯೋಗ ಮಾನದಂಡಗಳನ್ನು ಸರಳಗೊಳಿಸುವಂತೆ ಅವರು ಸರಕಾರವನ್ನು ಒತ್ತಾಯಿಸಿದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ