ಬಾಗಲಕೋಟೆ (ಏ. 11): ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ ಎನ್ನುವ ಈಶ್ವರಪ್ಪ ಕುರುಬರಿಗೇ ಒಂದು ಸೀಟು ಕೊಡಸಲಾಗಲಿಲ್ಲ. ಇನ್ನು ಮುಸ್ಲಿಮರಿಗೇನು ಕೊಡಿಸ್ತಾನೆ? ಎಂದು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಪಾಪ ನೊಂದು ಬಿಟ್ಟಿದ್ದಾನೆ. ನಾವು ಪಾದ ಹಿಡಿಯೋರೇ ಹೊರತು ತಲೆ ಹಿಡಿಯುವವರಲ್ಲ. ಕನ್ನಡ ನಾಡಿನ ಜನತೆಯ ಪಾದವೇ ನಮಗೆ ಶ್ರೀರಕ್ಷೆ. ನಮ್ಮ ಸರ್ವಸ್ವವೇ ಅವರ ಪಾದದ ಮೇಲಿದೆ. ಚುನಾವಣೆ ಮುಗಿದ ಬಳಿಕ ಈಶ್ವರಪ್ಪ ಸರಿಯಾಗ್ತಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೇನೆಯನ್ನು ಮೋದಿ ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಈಗ ಏನೇ ಇದ್ದರೂ ಕಾಲಾಯ ತಸ್ಮೈ ನಮಃ. ಈ ಪುಣ್ಯ ಭೂಮಿ ಮೇಲೆ ಪಾಪಿಗಳು ನಿಲ್ಲೋದಿಲ್ಲ. ರಾವಣನೂ ನಿಂತಿಲ್ಲ ದುರ್ಯೋಧನನೂ ನಿಂತಿಲ್ಲ ಎನ್ನುವ ಮೂಲಕ ಮೋದಿಯನ್ನು ರಾವಣ ಹಾಗೂ ದುರ್ಯೋಧನನಿಗೆ ಹೋಲಿಸಿ ಟೀಕಿಸಿದ್ದಾರೆ.
ಇಮ್ರಾನ್ ಖಾನ್ ಮೋದಿ ಮತ್ತೆ ಪ್ರಧಾನಿಯಾದರೆ ಕಾಶ್ಮೀರದ ಸಮಸ್ಯೆ ಶಾಂತಿ ಮಾತುಕತೆ ಮೂಲಕ ಬಗೆಹರಿಯುತ್ತದೆ ಎಂದು ಹೇಳಿರುವ ಬಗ್ಗೆ ಮಾತನಾಡಿದ ಸಿ.ಎಂ. ಇಬ್ರಾಹಿಂ, ಅದೇ ಇಮ್ರಾನ್ ಖಾನ್ ರಾಹುಲ್ ಗಾಂಧಿ ಬಗ್ಗೆ ಹೇಳಿದ್ದರೆ ಇಷ್ಟೊತ್ತಿಗಾಗಲೇ ಅಮಿತ್ ಶಾ ತಕಥೈ ಎಂದು ಕುಣಿದುಬಿಡುತ್ತಿದ್ದ. ಪಾಕಿಸ್ತಾನಕ್ಕೂ ಮೋದಿಗೂ ಗಾಢವಾದ ಸಂಬಂಧವಿದೆ. ನವಾಜ್ ಷರೀಫ್ ಕರೆಯದಿದ್ರೂ ಮೋದಿ ಗಿಫ್ಟ್ ತಗೊಂಡು ಹೋಗಿದ್ದರು ಎಂದು ಟೀಕಿಸಿದ್ದಾರೆ.ಬಿಜೆಪಿಯವರು ಬಲಿಷ್ಠ ಪ್ರಧಾನಿ ಬೇಕು ಅಂತಾರೆ. ತತ್ವ ಸಿದ್ಧಾಂತದಲ್ಲಿ ಪ್ರಧಾನಿ ಬಲಿಷ್ಠನಾಗಿರಬೇಕು. 70 ವರ್ಷದ ಇತಿಹಾಸವನ್ನು ಮೋದಿ ತಗೆದು ನೋಡಲಿ. ಮೋದಿ ಮತ್ತು ಇಮ್ರಾನ್ ಖಾನ್ ನಡುವಿನ ಒಳ ಒಪ್ಪಂದ ಬಗ್ಗೆ ಅಮಿತ್ ಶಾ ಮಾತನಾಡಬೇಕು. ಇದನ್ನೆಲ್ಲ ನೋಡಿದರೆ ಪುಲ್ವಾಮಾ, ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅನುಮಾನ ಶುರುವಾಗಿದೆ ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ