ಪುತ್ತೂರು: ತಾನೋಬ್ಬ ಚೌಕೀದಾರ್ ಎಂದು ಹೇಳಿ ಪ್ರಚಾರ ಗಿಟ್ಟಿಸಿಕೊಂಡ ಮೋದಿಯವರು ತನ್ನ ಆ ಕೆಲಸವನ್ನು ನಿಯತ್ತಾಗಿ ಮಾಡುತ್ತಿದ್ದಲ್ಲಿ ರಫೇಲ್ ಕಡತ ಕಾಣೆಯಾಗುತ್ತಿರಲಿಲ್ಲ ಎಂದು ದಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.
ಅವರು ಪುತ್ತೂರಿನಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಮಿಥುನ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ ಮೋದಿಯವರಿಗೆ ಅಧಿಕಾರಕ್ಕೆ ಬರುವ ಮೊದಲು ಹೇಳಿದ್ದ ಮಾತುಗಳು ಭರವಸೆಗಳು ಇಂದು ಯಾವುದೂ ನೆನಪಿಲ್ಲ ಈ ಚುನಾವಣಾ ಸಂದರ್ಭದಲ್ಲಿ ಹೇಳಿದ್ದು ಅವರಿಗೆ ಮುಂದೆಯೂ ನೆನಪಿರಲು ಸಾಧ್ಯವಿಲ್ಲ ಆದ್ದರಿಂದ ಮತದಾರರು ಯೋಚಿಸಿ ಮತ ಚಲಾಯಿಸಬೇಕಾಗಿದೆ ಎಂದರು.
ದೇಶದ ಭದ್ರತೆ ಆಪಾಯ ಒಂದು ಕಡೆಯಾದರೆ ರೈತರ ಕಷ್ಟ ಕೇಳುವವರಿಲ್ಲ. ಕಾರ್ಮಿಕರ ಕಷ್ಟಗಳಿಗೆ ಸ್ಪಂದನೆಯಿಲ್ಲ, ಸರಕಾರಿ ಉದ್ಯೋಗಿಗಳಿಗೆ ಬೆಲೆ ಸಿಗುತ್ತಿಲ್ಲ, ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಇದಕ್ಕೆಲ್ಲಾ ಪರಿಹಾರ ಸಿಗಬೇಕಾದರೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ನಮ್ಮ ಸಂಸದರಾಗಬೇಕು ಆ ಮೂಲಕ ರಾಹುಲ್ ಗಾಂಧಿಯವರು ಪ್ರಧಾನಿಯಾಗಬೇಕು ಎಂದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್