ನವದೆಹಲಿ: ಮತಯಂತ್ರ ಬಳಕೆ ವಿಚಾರವಾಗಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚುನಾವಣಾ ಆಯೋಗ ಬಿಜೆಪಿ ಬ್ರ್ಯಾಂಚ್ ಆಫೀಸ್ ಆಗಿ ಪರಿವರ್ತನೆಯಾಗಿದೆ ಎಂದು ಕಿಡಿ ಕಾರಿದ್ದಾರೆ.
ದೇಶದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ 20 ಕ್ಕೂಅಧಿಕ ಪಕ್ಷಗಳು ದೆಹಲಿಯಲ್ಲಿ ಸಭೆ ಸೇರಿ ಮತಯಂತ್ರದ ಬಗ್ಗೆ ಸಂಶಯ ವ್ಯಕ್ತಪಡಿಸಿವೆ.ಈ ವಿಚಾರವಾಗಿ ಎಲ್ಲ ಪ್ರತಿಪಕ್ಷಗಳನ್ನು ಒಗ್ಗೂಡಿಸಿರುವ ಚಂದ್ರಬಾಬು ನಾಯ್ಡು “ನಮಗೆ ಇವಿಎಮ್ಗಳ ಬಗ್ಗೆ ಅನುಮಾನ ಮೂಡುತ್ತಿದೆ.ಈಗ ಮತಪತ್ರದ ಮೂಲಕ ನಡೆಯುವ ಮತದಾನವನ್ನು ಮಾತ್ರ ನಂಬಬಹುದಾಗಿದೆ” ಎಂದರು.
ಇದೇ ವೇಳೆ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ಅವರು “ಇಂತಹ ಒಂದು ಅಸೂಕ್ಷ್ಮ, ಅವಾಸ್ತವಿಕ, ಬೇಜವಾಬ್ದಾರಿಯುತ ಚುನಾವಣಾ ಆಯೋಗವನ್ನು ನಾನು ಎಂದಿಗೂ ನೋಡಿಲ್ಲ. ನೀವು ಪ್ರಜಾಪ್ರಭುತ್ವದ ಅಣಕ ಮಾಡುತ್ತಿದ್ದಿರಾ? ಚುನಾವಣಾ ಆಯೋಗವು ಬಿಜೆಪಿ ಬ್ರಾಂಚ್ ಆಫೀಸ್ ಆಗಿ ಮಾರ್ಪಟ್ಟಿದೆ” ಎಂದು ವಾಗ್ದಾಳಿ ನಡೆಸಿದರು.
ಮುಂದುವರೆದ ದೇಶಗಳಾದ ಜರ್ಮನಿಯಂತಹ ದೇಶಗಳು 2005-09 ರ ಅವಧಿಯಲ್ಲಿ ಮತಯಂತ್ರವನ್ನು ಬಳಸಿದ್ದವು ಆದರೆ ಈಗ ಅದು ಮತಪತ್ರದ ಮೂಲಕ ಚುನಾವಣೆಯನ್ನು ನಡೆಸುತ್ತಿದೆ ಎಂದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ