ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ವೇಳೆ ಅವರ ಹೆಲಿಕಾಪ್ಟರ್ನಿಂದ ಕೆಳಗಿಳಿಸಿದ ‘ಕಪ್ಪು ಬಣ್ಣದ ಪೆಟ್ಟಿಗೆ ರಹಸ್ಯ’ ಕುರಿತು ತಕ್ಷಣ ತನಿಖೆ ನಡೆಸುವಂತೆ ಚುನಾವಣಾ ಆಯೋಗವನ್ನು ಕಾಂಗ್ರೆಸ್ ಆಗ್ರಹಿಸಿದೆ.
ಭಾನುವಾರ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡ ಆನಂದ ಶರ್ಮಾ ಅವರು, ಈ ಸಂಬಂಧ ವಿಡಿಯೊವೊಂದನ್ನು ಪ್ರದರ್ಶಿಸಿದರು. ಕಪ್ಪು ಟ್ರಂಪ್ ಹೊತ್ತ ಇಬ್ಬರು ವ್ಯಕ್ತಿಗಳು ಹೆಲಿಪ್ಯಾಡ್ನಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ಕಾರಿಗೆ ಅದನ್ನು ವರ್ಗಾಯಿಸುತ್ತಿರುವ ದೃಶ್ಯ ಈ ವಿಡಿಯೊದಲ್ಲಿದೆ. ಮೋದಿ ಅವರು ಹೆಲಿಕಾಪ್ಟರ್ನಿಂದ ಇಳಿದ ತಕ್ಷಣವೇ ಈ ಪೆಟ್ಟಿಗೆಯನ್ನು ಕಾರಿಗೆ ಸಾಗಿಸಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಧಾನಿಯವರ ಹೆಲಿಕಾಪ್ಟರ್ನಲ್ಲಿ ಏನನ್ನು ತುಂಬಿಸಲಾಗಿತ್ತು ಎಂದು ಎಸ್ಪಿಜಿ (ವಿಶೇಷ ರಕ್ಷಣಾ ದಳ) ಸ್ಪಷ್ಟಪಡಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಕರ್ನಾಟಕ ಕಾಂಗ್ರೆಸ್ ಘಟಕವು ಈಗಾಗಲೇ ಚುನಾವನಾ ಆಯೋಗಕ್ಕೆ ದೂರು ನೀಡಿದೆ.
ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಹಾಗೂ ಕೇಂದ್ರ ಸಚಿವರು ಪ್ರಯಾಣಿಸುವ ವಾಹನಗಳನ್ನು ಚುನಾವಣಾ ಆಯೋಗ ತಪಾಸಣೆಗೆ ಒಳಪಡಿಸಬೇಕು ಎಂದು ಶರ್ಮಾ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ