ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿವೆ. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ.ಶಿಖಾ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದರು.
ಮಾರ್ಚ್ 1ರಿಂದ 18ರವರೆಗೆ ಪರೀಕ್ಷೆ ನಡೆದಿತ್ತು. 6.71 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,16,587 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು ಶೇ61.73ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಮಾಣ ಶೇ 2.17 ಜಾಸ್ತಿ ಆಗಿದೆ. ಬಾಲಕಿಯರು ಶೇ 68.24 ಮತ್ತು ಬಾಲಕರು ಶೇ 55.29ರ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ.
ಉಡುಪಿ ಜಿಲ್ಲೆ ಶೇ 92.20 ತೇರ್ಗಡೆಯ ಪ್ರಮಾಣದೊಂದಿಗೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ90.91 ತೇರ್ಗಡೆ ಪ್ರಮಾಣದೊಂದಿಗೆ ದ್ವಿತೀಯ, ಕೊಡಗು ಶೇ 83.31 ತೇರ್ಗಡೆ ಪ್ರಮಾಣದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದೆ. ಚಿತ್ರದುರ್ಗ ಶೇ51.42ರಷ್ಟು ಫಲಿತಾಂಶ ಪಡೆದಿದ್ದು ಕೊನೆಯ ಸ್ಥಾನ ಪಡೆದಿದೆ.
ರಾಜ್ಯದ 15 ಸರ್ಕಾರಿ ಕಾಲೇಜು ಸೇರಿ 80 ಕಾಲೇಜುಗಳು ಶೇ100 ಫಲಿತಾಂಶ ಪಡೆದಿವೆ. 3 ಸರ್ಕಾರಿ ಕಾಲೇಜು ಸೇರಿ 94 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿವೆ. ಒಟ್ಟು 54,823 ಮಂದಿ ಉನ್ನತ ಶ್ರೇಣಿ (ಡಿಸ್ಟಿಂಕ್ಷನ್), 2,27,301 ಮಂದಿ ಪ್ರಥಮ ದರ್ಜೆ, 80,357 ಮಂದಿ ದ್ವಿತೀಯ ದರ್ಜೆ, 52,106 ಮಂದಿ ಶೇ 50ಕ್ಕಿಂತ ಕಡಿಮೆ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಇಂದು (ಏ.15– ಸೋಮವಾರ) ಮಧ್ಯಾಹ್ನ 12ಕ್ಕೆ ಪದವಿ ಪೂರ್ಣ ಶಿಕ್ಷಣ ಇಲಾಖೆಯ ವೆಬ್ಸೈಟ್ www.pue.kar.nic.in ಮತ್ತು www.karresults.nic.in ರಲ್ಲಿ ಲಭ್ಯವಾಗಲಿದೆ. ಜೀವಶಾಸ್ತ್ರದ (ಬಯಾಲಜಿ) ಪ್ರಶ್ನಪತ್ರಿಕೆ ಕಷ್ಟವಿತ್ತು ಎನ್ನುವ ಮಾತುಗಳು ವ್ಯಾಪಕವಾಗಿ ಕೇಳಿ ಬಂದಿದ್ದವು. ಈ ಹಿನ್ನೆಲೆಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಫಲಿತಾಂಶ ಮತ್ತು ಗಳಿಸಿದ ಅಂಕ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದರು.
ಮಧ್ಯಾಹ್ನ 12 ಕ್ಕೆ ಇಲಾಖೆ ವೆಬ್ಸೈಟ್www.pue.kar.nic.in ಮತ್ತು www.karresults.nic.in ರಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಲಾಗುವುದು ಎಂದು ಇಲಾಖೆಯ ನಿರ್ದೇಶಕಿ ಶಿಖಾ ತಿಳಿಸಿದ್ದಾರೆ. ನಾಳೆ (ಮಂಗಳವಾರ) ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ