ಬೆಂಗಳೂರು(ಏ. 16): ನೋಟ್ ಬ್ಯಾನ್ ಕ್ರಮದಿಂದ ಇಡೀ ಅರ್ಥವ್ಯವಸ್ಥೆಯೇ ಹದಗೆಟ್ಟಿದೆ. ದೇಶದ ಉದ್ದಿಮೆಗೆ ತೀವ್ರ ಪೆಟ್ಟುಬಿದ್ದಿದೆ. ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ಖಾಸಗಿ ಸಂಸ್ಥೆಯ ಅಧ್ಯಯನ ವರದಿಯೊಂದು ತಿಳಿಸಿದೆ.
ಅಜೀಮ್ ಪ್ರೇಮ್ಜೀ ವಿಶ್ವವಿದ್ಯಾಲಯದ ವರದಿಯೊಂದರ ಪ್ರಕಾರ ಡೀಮಾನಿಟೈಸೇಶನ್ ಆದ ನಂತರ ದೇಶದಲ್ಲಿ 50 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರಂತೆ. 2016ರ ನಂತರ ದೇಶದಲ್ಲಿ ನಿರುದ್ಯೋಗ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದೆ ಎಂದು “ಸ್ಟೇಟ್ ಆಫ್ ವರ್ಕಿಂಗ್ ಇಂಡಿಯಾ 2019” ವರದಿಯಲ್ಲಿ ತಿಳಿಸಲಾಗಿದೆ.
ಕಳೆದ ಒಂದು ದಶಕದಿಂದಲೂ ದೇಶದಲ್ಲಿ ನಿರುದ್ಯೋಗ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಆದರೆ, 2016ರ ನಂತರ ನಿರುದ್ಯೋಗ ಪ್ರಮಾಣ ಉಚ್ಛ್ರಾಯ ಮಟ್ಟ ತಲುಪಿತು ಎಂದು ಈ ವರದಿ ಹೇಳುತ್ತಿದೆ. ಇದರ ಪ್ರಕಾರ, 20-24 ವಯೋಮಾನದ ಯುವಸಮುದಾಯದವರ ಉದ್ಯೋಗಕ್ಕೇ ಅತಿ ಹೆಚ್ಚು ಕುತ್ತು ಬಂದಿದೆ.
ನಗರ, ಗ್ರಾಮೀಣ ಎರಡೂ ಭಾಗದವರೂ ನಿರುದ್ಯೋಗದ ಬಿಸಿ ಅನುಭವಿಸಿದ್ದಾರೆನ್ನಲಾಗಿದೆ. ಉದ್ಯೋಗ ವಿಚಾರದಲ್ಲಿ ಸದಾ ಹಿನ್ನಡೆಯಲ್ಲಿರುವ ಮಹಿಳೆಯರಿಗೆ 2016ರ ನಂತರ ಅತೀ ಹೆಚ್ಚು ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಹಾಗೆಯೇ, ಸುಶಿಕ್ಷಿತರ ನಿರುದ್ಯೋಗದಲ್ಲೂ ಭಾರೀ ಏರಿಕೆಯಾಗಿದೆ ಎಂದು ಈ ವರದಿ ಹೇಳುತ್ತಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ