ದುಬೈ: ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಡೆಸಿದ ಕೋಮು ಪ್ರಚೋದಕ ಪರಾಮರ್ಶೆಯನ್ನು ಬೆಂಬಲಿಸಿ ದುಬೈನಲ್ಲಿ ವಾಸವಿರುವ ಭಾರತೀಯ ಡಾಕ್ಟರ್ ಒಬ್ಬರು ಟ್ವೀಟ್ ಮಾಡಿದ್ದಾರೆ.ಅವರ ವಿರುದ್ದ ದುಬೈ ಪೋಲೀಸರು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಹಿಂದೂ, ಬೌದ್ಧರು ಮತ್ತು ಸಿಖ್ಖರನ್ನು ಹೊರತುಪಡಿಸಿ ಬಾಕಿ ಉಳಿದಿರುವ ಎಲ್ಲಾ ವಲಸಿಗರನ್ನು ದೇಶದಿಂದ ಹೊರಹಾಕಲಾಗುವುದು ಎನ್ನುವ ಪ್ರಸಂಗವನ್ನು ಬೆಂಬಲಿಸಿ, ಡಾ.ನಿಷಿ ಸಿಂಗ್ ಎನ್ನುವ ಖಾತೆಯಿಂದ ಕೋಮು ಪ್ರಚೋದಕ ಸಂದೇಶ ರವಾನೆಯಾಗಿದೆ.
ಬ್ರಾಹ್ಮಣರಲ್ಲದ ಎಲ್ಲಾ ವಿಶ್ವಾಸಿಗಳ ಏಕ ಉದ್ದೇಶ ಮತಾಂತರವಾಗಿದ್ದು, ಸಮಾಜ ಸೇವೆಯ ನೆಪದಲ್ಲಿ ಲೆಕ್ಕವಿಲ್ಲದಷ್ಟು ಅನಧಿಕೃತ ಹಣವು ಇದಕ್ಕಾಗಿ ಹರಿದುಬರುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದರು. ಕೋಮು ಪ್ರಚೋದನೆಗೆ ಪ್ರೋತ್ಸಾಹ ನೀಡುವ ಈ ನಿಲುವಿನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಬಾರೀ ಪ್ರತಿಭಟನೆ ಕೇಳಿಬಂದಿದೆ.
ಯುಎಇಯಲ್ಲಿ ಕಳೆದ ಇಪ್ಪತ್ತೈದು ವರ್ಚಗಳಿಂದ ವಾಸವಿರುವುದಾಗಿ ಆತ, ಒಂದು ಚಿಕಿತ್ಸಾ ಕೇಂದ್ರದ ವೆಬ್ ಸೈಟ್ ನಲ್ಲಿ ಬರೆಯುತ್ತಾ ಬಂದಿರುವ ಕಾಲಂನಲ್ಲಿ ವ್ಯಕ್ತಪಡಿಸಲಾಗಿದೆ. ಆದರೆ ನೂರಕ್ಕಿಂತಲೂ ಹೆಚ್ಚು ರಾಷ್ಟ್ರಗಳಿಂದ ಬಂದು ಜಾತಿ, ಮತ, ವರ್ಗ,ಭಾಷೆಗಳ ಬೇಧವಿಲ್ಲದೆ ಕೆಲಸಮಾಡುವ, ಜೀವಿಸುವ ಯುಎಇಯ ಪಾವಿತ್ರ್ಯವನ್ನು ಅವರು ಇನ್ನೂ ಅರ್ಥ ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿರೋಧ ಕೇಳಿಬಂದ ನಂತರ ಆಸ್ಪತ್ರೆಯ ವೆಬ್ಸೈಟ್ ನಿಂದ ಅವರ ಲೇಖನವನ್ನು ಕಿತ್ತು ಹಾಕಲಾಗಿದೆ. ಯಾವುದೇ ಧರ್ಮದವರನ್ನು ನಿಂದನೆ ಮಾಡುವ ಕಾರ್ಯವನ್ನು ನಿಷೇಧಿಸಿರುವ ರಾಷ್ಟ್ರವಾಗಿದೆ ಯುಎಇ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ