ದುಬೈ: ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಡೆಸಿದ ಕೋಮು ಪ್ರಚೋದಕ ಪರಾಮರ್ಶೆಯನ್ನು ಬೆಂಬಲಿಸಿ ದುಬೈನಲ್ಲಿ ವಾಸವಿರುವ ಭಾರತೀಯ ಡಾಕ್ಟರ್ ಒಬ್ಬರು ಟ್ವೀಟ್ ಮಾಡಿದ್ದಾರೆ.ಅವರ ವಿರುದ್ದ ದುಬೈ ಪೋಲೀಸರು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಹಿಂದೂ, ಬೌದ್ಧರು ಮತ್ತು ಸಿಖ್ಖರನ್ನು ಹೊರತುಪಡಿಸಿ ಬಾಕಿ ಉಳಿದಿರುವ ಎಲ್ಲಾ ವಲಸಿಗರನ್ನು ದೇಶದಿಂದ ಹೊರಹಾಕಲಾಗುವುದು ಎನ್ನುವ ಪ್ರಸಂಗವನ್ನು ಬೆಂಬಲಿಸಿ, ಡಾ.ನಿಷಿ ಸಿಂಗ್ ಎನ್ನುವ ಖಾತೆಯಿಂದ ಕೋಮು ಪ್ರಚೋದಕ ಸಂದೇಶ ರವಾನೆಯಾಗಿದೆ.
ಬ್ರಾಹ್ಮಣರಲ್ಲದ ಎಲ್ಲಾ ವಿಶ್ವಾಸಿಗಳ ಏಕ ಉದ್ದೇಶ ಮತಾಂತರವಾಗಿದ್ದು, ಸಮಾಜ ಸೇವೆಯ ನೆಪದಲ್ಲಿ ಲೆಕ್ಕವಿಲ್ಲದಷ್ಟು ಅನಧಿಕೃತ ಹಣವು ಇದಕ್ಕಾಗಿ ಹರಿದುಬರುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದರು. ಕೋಮು ಪ್ರಚೋದನೆಗೆ ಪ್ರೋತ್ಸಾಹ ನೀಡುವ ಈ ನಿಲುವಿನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಬಾರೀ ಪ್ರತಿಭಟನೆ ಕೇಳಿಬಂದಿದೆ.
ಯುಎಇಯಲ್ಲಿ ಕಳೆದ ಇಪ್ಪತ್ತೈದು ವರ್ಚಗಳಿಂದ ವಾಸವಿರುವುದಾಗಿ ಆತ, ಒಂದು ಚಿಕಿತ್ಸಾ ಕೇಂದ್ರದ ವೆಬ್ ಸೈಟ್ ನಲ್ಲಿ ಬರೆಯುತ್ತಾ ಬಂದಿರುವ ಕಾಲಂನಲ್ಲಿ ವ್ಯಕ್ತಪಡಿಸಲಾಗಿದೆ. ಆದರೆ ನೂರಕ್ಕಿಂತಲೂ ಹೆಚ್ಚು ರಾಷ್ಟ್ರಗಳಿಂದ ಬಂದು ಜಾತಿ, ಮತ, ವರ್ಗ,ಭಾಷೆಗಳ ಬೇಧವಿಲ್ಲದೆ ಕೆಲಸಮಾಡುವ, ಜೀವಿಸುವ ಯುಎಇಯ ಪಾವಿತ್ರ್ಯವನ್ನು ಅವರು ಇನ್ನೂ ಅರ್ಥ ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿರೋಧ ಕೇಳಿಬಂದ ನಂತರ ಆಸ್ಪತ್ರೆಯ ವೆಬ್ಸೈಟ್ ನಿಂದ ಅವರ ಲೇಖನವನ್ನು ಕಿತ್ತು ಹಾಕಲಾಗಿದೆ. ಯಾವುದೇ ಧರ್ಮದವರನ್ನು ನಿಂದನೆ ಮಾಡುವ ಕಾರ್ಯವನ್ನು ನಿಷೇಧಿಸಿರುವ ರಾಷ್ಟ್ರವಾಗಿದೆ ಯುಎಇ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು