ಮಂಗಳೂರು: ರಾಜಕೀಯ ಪಕ್ಷವೊಂದರ ಮುಖಂಡರೊಬ್ಬರು ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಬಹಿರಂಗವಾಗಿ ಧಾರ್ಮಿಕ ಉಲಮಾಗಳನ್ನು ಹಾಗೂ ಶರೀಅತ್ ನ್ನು ನಿಂದಿಸಿ ಮಾತನಾಡಿರುವುದನ್ನು ಎಸ್ಸೆಸ್ಸೆಪ್ ದ.ಕ.ಜಿಲ್ಲಾ ಸಮಿತಿ ಖಂಡಿಸಿದೆ.
ಭಾಷಣವು ವಿವಾದವಾದ ಬಳಿಕ ಧ್ವನಿಸಂದೇಶದ ಮೂಲಕ ಕೊಟ್ಟ ಸ್ಪಷ್ಟೀಕರಣವು ಅಸ್ಪಷ್ಟ ಹಾಗೂ ದ್ವಂದ್ವದಿಂದ ಕೂಡಿದೆ. ಬಹಿರಂಗ ಸಭೆಯಲ್ಲಿ ಮಾಡಿದ ತಪ್ಪಿಗೆ ಬರೀ ಧ್ವನಿಸಂದೇಶದ ಕ್ಷಮೆ ಕೇಳುವ ಮೂಲಕ ತೇಪೆ ಹಚ್ಚಿರುವುದನ್ನು ಸಮುದಾಯ ಒಪ್ಪುವುದಿಲ್ಲ ಎಂದು ಎಸ್ಸೆಸ್ಸೆಫ್ ಅಭಿಪ್ರಾಯಿಸಿದೆ.
ಉಲಮಾಗಳು ಮುಸ್ಲಿಂ ಸಮುದಾಯವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುತ್ತಿದ್ದಾರೆ. ಉಲಮಾಗಳಿಗೆ ಸವಾಲೆಸೆಯುವ ನೈತಿಕ ಹಕ್ಕು ಯಾವುದೇ ರಾಜಕಾರಣಿಗಳಿಗಿಲ್ಲ.
ಎಸ್ಸೆಸ್ಸೆಫ್ ಸಂಘಟನೆಯು ಯಾವುದೇ ರಾಜಕೀಯ ಪಕ್ಷದ ಪರವೂ ಅಲ್ಲ. ವಿರುದ್ಧವೂ ಅಲ್ಲ. ಮತದಾನದಲ್ಲಿ ಎಲ್ಲರೂ ಭಾಗವಹಿಸಿ, ದೇಶದ ಸಂವಿಧಾನವನ್ನು ರಕ್ಷಿಸಬಲ್ಲ ಅಭ್ಯರ್ಥಿಗೆ ಮತಚಲಾಯಿಸುವಂತೆ ದ.ಕ ಜಿಲ್ಲಾ ಎಸ್ಸೆಸ್ಸೆಪ್ ಪತ್ರಿಕಾ ಹೇಳಿಕೆಯಲ್ಲಿ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್