ಹೊಸಪೇಟೆ: ‘ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಲಾಭ ಗಳಿಸುವ ಉದ್ದೇಶದಿಂದಲೇ ಬಿಜೆಪಿಯು ಪುಲ್ವಾಮ ದಾಳಿಯ ಸಂಚು ರೂಪಿಸಿತ್ತು. ಈ ಕುರಿತು ಸಮಗ್ರ ತನಿಖೆಯಾದರೆ ಸತ್ಯ ಹೊರಬರುತ್ತದೆ’ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್.ಎಸ್. ಬಸವರಾಜ ಆಗ್ರಹಿಸಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಂದೇ ಒಂದು ಜನಪರ ಕೆಲಸ ಮಾಡಿಲ್ಲ. ಚುನಾವಣೆಯಲ್ಲಿ ಅವರು ಸೋಲುವುದು ಖಚಿತವಾಗಿತ್ತು. ಅದನ್ನು ಅರಿತು ಪುಲ್ವಾಮ ದಾಳಿ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಿರ್ದಿಷ್ಟ ದಾಳಿಯ ಕಥೆ ಕಟ್ಟಿ, ಜನರನ್ನು ಭಾವನಾತ್ಮಕವಾಗಿ ಕಟ್ಟಿ ಹಾಕಿ ಮತ ಸೆಳೆಯಲು ಯೋಜನೆ ರೂಪಿಸಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದರು.
‘ಉದ್ಯೋಗ ಸೃಷ್ಟಿಸುವುದರ ಬದಲು ನಿರುದ್ಯೋಗ ಸೃಷ್ಟಿಯಾಗಿದೆ. ಸರಕು ಮತ್ತು ಸೇವಾ ತೆರಿಗೆಯಿಂದ (ಜಿ.ಎಸ್.ಟಿ.) ಸಣ್ಣ ಉದ್ದಿಮೆಗಳು ಬಂದ್ ಆಗಿವೆ. ಅಲ್ಲಿನ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ತಂದಿಲ್ಲ. ರೈತರು ಖರೀದಿಸುವ ಕೃಷಿ ಉತ್ಪನ್ನಗಳಿಗೆ ಸಬ್ಸಿಡಿ ಕೊಡುವ ಬದಲು, ರಾಸಾಯನಿಕ ಕಂಪನಿಗಳಿಗೆ ಸಬ್ಸಿಡಿ ಕೊಟ್ಟಿದ್ದಾರೆ. ಐದು ವರ್ಷ ಕಾರ್ಪೊರೇಟ್ ಜಗತ್ತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಿರುವುದು ಮೋದಿಯವರ ಹೆಗ್ಗಳಿಕೆ. ಮತ್ತೆ ಮೋದಿ ಅಧಿಕಾರಕ್ಕೆ ಬಂದರೆ ಬಂಡವಾಳಶಾಹಿಗಳಿಗೆ ಮಣೆ ಹಾಕುವುದು ಬಿಟ್ಟರೆ ಬೇರೇನೂ ಕೆಲಸ ಮಾಡುವುದಿಲ್ಲ’ ಎಂದು ಟೀಕಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ