ಬೆಂಗಳೂರು: ಪದ್ಮನಾಭ ನಗರದ ಮತಕೇಂದ್ರ 172ರ ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹಾಕಲಾಗಿದ್ದು, ಅದರಿಂದ 15ಕ್ಕೂ ಹೆಚ್ಚು ಮಂದಿ ಮತದಾನದಿಂದ ವಂಚಿತರಾಗಿದ್ದಾರೆ.
ಕುಟುಂಬ ಸಮೇತರಾಗಿ ಮತ ಚಲಾಯಿಸಲು ಮತಗಟ್ಟೆಗೆ ಬಂದಿದ್ದ ಮತದಾರರು, ಮತದಾರರ ಪಟ್ಟಿಯಲ್ಲಿ ಹೆಸರು ಅಳಿಸಿದ್ದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದರು.ಹೆಸರು ಅಳಿಸಿದ್ದನ್ನು ಪ್ರಶ್ನಿಸಿದರು ಮತಗಟ್ಟೆಯ ಅಧಿಕಾರಿಗಳು ಯಾರೂ ಉತ್ತರಿಸಲಿಲ್ಲ. ಮತಗಟ್ಟೆ ಬಿಟ್ಟು ಹೊರ ಹೋಗಿ ಎಂದು ಉಡಾಫೆ ಉತ್ತರ ನೀಡಿ ಕಳುಹಿಸಿದರು.
ಒಂದೇ ಕುಟುಂಬದ ಮಕ್ಕಳಿಗೆ ಮತದಾನದ ಅವಕಾಶ ಸಿಕ್ಕಿದ್ದು, ತಂದೆ-ತಾಯಿಗೆ ಅವಕಾಶ ಇರಲಿಲ್ಲ. ಅವರ ಹೆಸರುಗಳನ್ನು ಅಳಿಸಿ ಹಾಕಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವೃದ್ಧೆ ವಿಜಯಲಕ್ಷ್ಮಿ, ‘ಕುಟುಂಬದವರೆಲ್ಲ ಒಂದೇ ಮನೆಯಲ್ಲಿದ್ದೇವೆ. ಮಗನಿಗೆ ಮತ ಹಕ್ಕು ನನಗೆ ಇಲ್ಲ. ಯಾವುದೇ ಮಾಹಿತಿ ನೀಡದೇ ಮನೆಗೂ ಬಂದು ವಿಚಾರಿಸದೇ ಹೆಸರು ಅಳಿಸಿದ್ದಾರೆ’ ಎಂದರು.
‘ಈ ಬಗ್ಗೆ ವಿಚಾರಿಸಿದರೆ ಯಾರೊಬ್ಬರೂ ಸ್ಪಂದನೆ ನೀಡುತ್ತಿಲ್ಲ‘ ಎಂದು ದೂರಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ