ನವದೆಹಲಿ: ಈಗ ದೇಶದಲ್ಲೆಡೆ ಲೋಕಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ವಿಶ್ವ ಪತ್ರಿಕಾ ಸ್ವಾತಂತ್ರ ಸೂಚಂಕ್ಯ ಬಿಡುಗಡೆಯಾಗಿದೆ. ಆದರೆ ಭಾರತ ಈಗ ಸೂಚ್ಯಂಕದಲ್ಲಿ ಕುಸಿತ ಕಂಡಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.
ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ಎನ್ನುವ ಸಂಸ್ಥೆ ಬಿಡುಗಡೆ ಮಾಡಿರುವ ಸೂಚ್ಯಂಕದಲ್ಲಿ ಒಟ್ಟು 180 ದೇಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇದರಲ್ಲಿ ನಾರ್ವೆ ದೇಶವು ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ.ಭಾರತ 140ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಆ ಮೂಲಕ ಭಾರತದಲ್ಲಿನ ಪತ್ರಿಕಾ ಸ್ವಾತಂತ್ರ ಗಣನೀಯ ಪ್ರಮಾಣದಲ್ಲಿ ಕುಸಿದಿರುವುದು ಈಗ ಆತಂಕಕ್ಕೆ ಕಾರಣವಾಗಿದೆ.ಭಾರತದಲ್ಲಿ ಪತ್ರಕರ್ತರ ಮೇಲೆ ಹೆಚ್ಚುತ್ತಿರುವ ದಾಳಿಯಿಂದಾಗಿ ಕಳೆದ ವರ್ಷ 6 ಪತ್ರಕರ್ತರು ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಭಾರತ ಸೂಚ್ಯಂಕದಲ್ಲಿ ಕುಸಿದಿದೆ ಎನ್ನಲಾಗಿದೆ.
ವಿಶ್ವ ಪತ್ರಿಕಾ ಸ್ವಾತಂತ್ರ ಸೂಚ್ಯಂಕ ತನ್ನ ಪ್ರಕಟನೆಯಲ್ಲಿ ತಿಳಿಸಿರುವಂತೆ “ಪೊಲೀಸ್ ಹಿಂಸಾಚಾರ, ಮಾವೋವಾದಿ ಹೋರಾಟಗಾರರು ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ರಾಜಕಾರಣಿಗಳ ಪ್ರತೀಕಾರದಿಂದಾಗಿ ಪತ್ರಕರ್ತರ ಮೇಲೆ ಹಿಂಸಾಚಾರದಂತಹ ಘಟನೆಗಳು ಹೆಚ್ಚಿದ್ದು, ಇವು ಪ್ರಮುಖವಾಗಿ ಭಾರತದಲ್ಲಿ ಪತ್ರಿಕಾ ಸ್ವಾತಂತ್ರ ಕುಸಿಯುತ್ತಿರುವುದಕ್ಕೆ ಪ್ರಮುಖ ಕಾರಣಗಳಾಗಿವೆ” ಎಂದು ಸೂಚಂಕ್ಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್