ಮಂಗಳೂರು, ಎ .18: ಅಂಗಡಿಯಿಂದ ಸಾಮಾನು ಖರೀದಿಸಲು ಸ್ಕೂಟರಿನಲ್ಲಿ ತೆರಳಿದ್ದ ವಿದ್ಯಾರ್ಥಿನಿ ಸುಷ್ಮಾ ಶೆಟ್ಟಿ (15) ಸ್ಕೂಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಏಪ್ರಿಲ್ 17 ಬುಧವಾರ ಮಧ್ಯಾಹ್ನ ಗಂಜಿಮಠ ಬಳಿ ಕುಕ್ಕಟ್ಟೆ ತರೇಮಾರ್ನಲ್ಲಿ ಈ ಅಪಘಾತ ಸಂಭವಿಸಿದೆ.
ಮೊಗರುಗುತ್ತು ಹೊಸಮನೆ ಸೀತಾರಾಮ್ ಶೆಟ್ಟಿ ಮತ್ತು ಯಶೋಧಾ ದಂಪತಿಗಳ ಮಗಳಾದ ಸುಷ್ಮಾ ಶೆಟ್ಟಿ ಗುರ್ಪುರ ಕೈಕಂಬದ ಪಾಂಪೈ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು.
ಸ್ಕೂಟರ್ನಲ್ಲಿ ತಾರೆಮಾರ್ನಲ್ಲಿ ಮನೆಯ ಹತ್ತಿರದ ಅಂಗಡಿಯಿಂದ ಕೆಲವು ಸಾಮಾನುಗಳನ್ನು ಖರೀದಿಸಲು ತೆರಳಿದ ಸುಷ್ಮಾ ಹಿಂದಿರುಗುವ ವೇಳೆ ತನ್ನ ವಾಹನದ ಚಕ್ರಗಳು ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡ ಸುಷ್ಮಾ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರತಿಭಾವಂತೆ ವಿದ್ಯಾರ್ಥಿನಿಯಾಗಿದ್ದ ಸುಷ್ಮಾ ಶೆಟ್ಟಿಯ ಮರಣವು ಗ್ರಾಮದ ಎಲ್ಲರಿಗೂ ತೀವ್ರವಾದ ದುಃಖವನ್ನು ತಂದಿದೆ. ಪ್ರಕರಣವನ್ನು ನೋಂದಾಯಿಸಿದ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್