ಮಡಿಕೇರಿ: ‘ಬಿಜೆಪಿ ಅಭ್ಯರ್ಥಿಗಳು ಕೇವಲ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿರುವುದು ಭವಿಷ್ಯದಲ್ಲಿ ಅಪಾಯಕಾರಿ ಆಗಲಿದೆ’ ಎಂದು ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ್ ಭಟ್ ಇಲ್ಲಿ ಶನಿವಾರ ಎಚ್ಚರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಇದು ರಾಷ್ಟ್ರಮಟ್ಟದ ಚುನಾವಣೆಯಾದರೂ ಮೋದಿಯನ್ನೇ ತೋರಿಸಿ ಮತ ಕೇಳುತ್ತಿರುವುದು ಒಳ್ಳೆಯ ಪ್ರಕ್ರಿಯೆ ಅಲ್ಲ. ಆರ್ಎಸ್ಎಸ್ ಸ್ವಯಂ ಸೇವಕರು ಎಂದೂ ವ್ಯಕ್ತಿಪೂಜೆ ಮಾಡುವುದಿಲ್ಲ’ ಎಂದು ಹೇಳಿದರು.
‘ಮೋದಿ ಅವರು ಕಳೆದ 65 ವರ್ಷಗಳಲ್ಲಿ ಆಗದ ಕೆಲಸಗಳನ್ನು ಐದು ವರ್ಷದಲ್ಲಿ ಮಾಡಿದ್ದಾರೆ. ಎಲ್ಲ ಹಂತದಲ್ಲೂ ಸಾಧನೆ ತೋರಿದ್ದಾರೆ. ಹಾಗಾಗಿಯೇ ಮೋದಿಗೆ ವೋಟು ಕೊಡುವಂತೆ ಬಿಜೆಪಿ ಅಭ್ಯರ್ಥಿಗಳು ಕೇಳುತ್ತಿದ್ದಾರೆ. ನೈಜವಾಗಿ ಅಭ್ಯರ್ಥಿಗಳು ತಮ್ಮ ಸಾಧನೆಯ ಆಧಾರದಲ್ಲಿ ಮತಯಾಚಿಸಬೇಕಿತ್ತು. ಮೋದಿ ಸಾಧನೆ ಎದುರು ಅಭ್ಯರ್ಥಿಗಳು ಗೌಣವಾಗಿದ್ದಾರೆ’ ಎಂದರು.
‘ಮೋದಿ ಅವರು ಕ್ಷೇತ್ರದ ಅಭಿವೃದ್ಧಿಗೆಂದು ಸಂಸದರು ಏನು ಕೇಳಿದರೂ ನೀಡುತ್ತಿದ್ದರು. ಅದನ್ನು ಸಂಸದರು ಬಳಕೆ ಮಾಡಿಕೊಳ್ಳಬೇಕಿತ್ತು. ಕೆಲವರು ಆ ಸಾಧನೆ ಮಾಡಿರಲೂಬಹುದು. ಆದರೆ, ಮೋದಿ ಹೆಸರು ಮಾತ್ರ ಬಳಸಿಕೊಳ್ಳುತ್ತಿರುವುದು ಅಪಾಯಕಾರಿ’ ಎಂದು ಅಭಿಪ್ರಾಯಪಟ್ಟರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್