ಕಲ್ಲಿಕೋಟೆ: ಶ್ರೀಲಂಕಾದ ಕ್ರಿಸ್ಟಿಯನ್ ಧರ್ಮೀಯರ ವಿಶೇಷ ದಿನವಾದ ಈಸ್ಟರ್ ನಂದು ಚರ್ಚ್ ಹಾಗೂ ಹೋಟೆಲ್ ಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಗಳು ಅತ್ಯಂತ ಹೀನ ಕೃತ್ಯ ಹಾಗೂ ಖಂಡನೀಯ, ಘಟನೆಯಲ್ಲಿ ಬಲಿಯಾದವರ ಕುಟುಂಬಿಕರ ದುಃಖದಲ್ಲಿ ನಾವು ಕೂಡಾ ಭಾಗಿಯಾಗಿದ್ದೇವೆ ಎಂದು ಭಾರತದ ಗ್ರಾಂಡ್ ಮುಫ್ತಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಹೇಳಿದ್ದಾರೆ.
ಭಯೋತ್ಪಾದಕರು ವಿಶ್ವದ ಶಾಂತಿಯನ್ನು ನಾಶಪಡಿಸಲು ಬಯಸುತ್ತಾರೆ. ಹಿಂಸೆಯೇ ಅವರ ಗುರಿ. 200 ಕ್ಕಿಂತ ಹೆಚ್ಚು ಜನರನ್ನು ಕೊಂದು ಅವರು ಏನನ್ನು ಸಾಧಿಸಿದರು? ಪ್ರಾರ್ಥನಾ ಸ್ಥಳಗಳು ಮತ್ತು ಹೋಟೆಲ್ ಗಳಲ್ಲಿ ಜನರು ಸಮಾಧಾನವನ್ನು ಬಯಸಿ ಮಾನುಷಿಕ ಸಂತೋಷವನ್ನು ಅನುಭವಿಸಲು ಭೇಟಿ ನೀಡುತ್ತಾರೆ. ಅಂತಹ ಕೇಂದ್ರಗಳಲ್ಲಿ ಭಯೋತ್ಪಾದಕ ದಾಳಿ ನಡೆಸುವವರು ಮಾನವೀಯ ಶಾಂತಿಯನ್ನು ಅಂತ್ಯಗೊಳಿಸಲು ಬಯಸುವವರಾಗಿದ್ದಾರೆ.
ಘಟನೆಯ ಬಳಿಕ ಶ್ರೀಲಂಕಾ ಸರ್ಕಾರ ಕೈಗೊಂಡ ರಚನಾತ್ಮಕ ಚಟುವಟಿಕೆಗಳು ಪ್ರಶಂಸನೀಯ.
ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ನಡೆಸುವ ದಾಳಿಯ ಹಿಂದಿನ ರಹಸ್ಯವನ್ನು ಬೇಧಿಸಬೇಕು. ಅಪರಾಧಿಗಳನ್ನು ಪತ್ತೆಹಚ್ಚಲು ಅಗತ್ಯವಿದ್ದಲ್ಲಿ ನೆರೆಯ ರಾಜ್ಯ ಭಾರತ ಸಹಕಾರ ನೀಡಬೇಕು.
ಗಾಯಗೊಂಡಿರುವ 500ಕ್ಕೂ ಮಿಕ್ಕ ಜನರು ಶೀಘ್ರ ಚೇತರಿಸಿಕೊಳ್ಳಲು ವಿಶ್ವಾಸಿಗಳು ಪ್ರಾರ್ಥಿಸಬೇಕು ಎಂದು ಕಾಂತಪುರಂ ಮನವಿ ಮಾಡಿದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ