janadhvani

Kannada Online News Paper

ಎ.29:ರಾಜ್ಯ ಎಸ್ಸೆಸ್ಸೆಫ್ ನಿಂದ ಸ್ಥಾಪಕ ದಿನಾಚರಣೆ ಪ್ರಯುಕ್ತ ಲೀಡರ್ಸ್ ಅಸೆಂಬ್ಲಿ

ಉಡುಪಿ:ಎಸ್ಸೆಸ್ಸೆಫ್ ರಾಜ್ಯ ಸಮಿತಿ ವತಿಯಿಂದ ಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆಯ ಪ್ರಯುಕ್ತ ಲೀಡರ್ಸ್ ಅಸೆಂಬ್ಲಿ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 29 ಸೋಮವಾರ ಮಧ್ಯಾಹ್ನ 2:00 ಗಂಟೆಗೆ ಉಡುಪಿಯ ಲಯನ್ಸ್ ಭವನದಲ್ಲಿ ನಡೆಯಲಿರುವುದು.

ಸಯ್ಯದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ್ ದುಆ:ಶೀರ್ವಚನ ನಡೆಸಲಿರುವರು.

ಜನಾಬ್ ಅಬ್ದುಲ್ ವಹೀದ್ ಸಾಹೇಬ್ ಉಡುಪಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಅಬೂ ಸುಫ್ಯಾನ್ ಮದನಿ ಕಾಟಿಪಳ್ಳ ಹಾಗೂ ಇಬ್ರಾಹಿಂ ಸಖಾಫಿ ಕೋಟೂರು ತರಗತಿಯನ್ನು ನಡೆಸಲಿದ್ದಾರೆ.

ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ,ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಸ ಅದಿ ಬೆಂಗಳೂರು ಹಾಗೂ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಮುಹಮ್ಮದ್ ಶಬೀರ್ ಸಖಾಫಿ ಪಣಿಯೂರು ಶುಭ ಸಂದೇಶ ಭಾಷಣ ಮಾಡಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com