ಬೆಂಗಳೂರು: ಫೆನಿ ಚಂಡಮಾರುತದ ರೌದ್ರಾವತಾರದ ಪರಿಣಾಮ ತಮಿಳುನಾಡು, ಕರ್ನಾಟಕದ ಕೆಲವೆಡೆ ಭಾರೀ ಮಳೆಯಾಗುತ್ತಿದೆ. ಬೆಂಗಳೂರು, ಮೈಸೂರು ಸೇರಿದಂತೆ ಹಳೆ ಮೈಸೂರು ಭಾಗದ ಬಹುತೇಕ ಪ್ರದೇಶಗಳಲ್ಲಿ ಇವತ್ತು ರಾತ್ರಿ ಧಾರಾಕಾರ ಮಳೆ ಸುರಿದಿದೆ. ಗಾಳಿ, ಗುಡುಗು ಮಿಂಚು ಸಹಿತ ಮಳೆಯ ರೌದ್ರಾವತಾರವಾಗಿದೆ.
ಬೆಂಗಳೂರು, ಮೈಸೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮೊದಲಾದ ಕಡೆ ಒಂದು ಗಂಟೆಗೂ ಹೆಚ್ಚು ಕಾಲ ಎಡಬಿಡದೆ ಮಳೆಯಾಗಿದೆ. ಬೆಂಗಳೂರಿನ ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ಮೆಜೆಸ್ಟಿಕ್, ಬಸವನಗುಡಿ, ಜಯನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿತ್ತು. ಮಳೆಯಿಂದಾಗಿ ಹಲವು ಕಡೆ ಭಾರೀ ಟ್ರಾಫಿಕ್ ಕೂಡ ನಿರ್ಮಾಣವಾಗಿದೆ.
ಗ್ರಾಮಾಂತರ ಭಾಗದಲ್ಲಿ ಭೀಕರ ಮಳೆಯಿಂದ ರೈತರ ಬೆಳೆಗಳು ನಾಶವಾಗಿದೆ. ಹಲವು ಭಾಗಗಳು ಕರೆಂಟ್ ಇಲ್ಲದೆ ಕತ್ತಲಲ್ಲಿ ಮುಳುಗಿವೆ.
ಫೆನಿ ಚಂಡಮಾರುತದ ಪರಿಣಾಮವಾಗಿ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಇವತ್ತು ಮಳೆಯಾಗಿದೆ. ಇನ್ನೆರಡು ದಿನಗಳ ಕಾಲ ಚಂಡಮಾರುತದಿಂದ ರಾಜ್ಯದಲ್ಲಿ ಮಳೆ ಸೃಷ್ಟಿಯಾಗುವ ನಿರೀಕ್ಷೆ ಇದೆ. ಮೇ 3ರಂದು ಫೆನಿ ಚಂಡಮಾರುತ ಒಡಿಶಾ ಕಡಲ ತೀರ ಮುಟ್ಟಿ ಹೋಗಲಿದೆ.
ಇದೇ ವೇಳೆ, ಬಿಸಿ ಗಾಳಿಯಿಂದ ನಲುಗಿಹೋಗಿರುವ ಯಾದಗಿರಿಯಲ್ಲೂ ಪ್ರಬಲ ಗಾಳಿ ಬೀಸುತ್ತಿದ್ದು ಮಳೆಯಾಗುವ ಸಂಭವ ಇದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ