ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಪ್ರಕರಣದಲ್ಲಿ ಮೋದಿಗೆ ಬಿಗ್ ರಿಲೀಫ್ ಸಿಕ್ಕಿದೆ.
ನರೇಂದ್ರ ಮೋದಿ ಯಾವುದೇ ನೀತಿ ಸಂಹಿತೆ ಉಲ್ಲಂಘಿಸಿಲ್ಲ ಅಂತ ಆಯೋಗ ತಿಳಿಸಿದೆ. ಮಹಾರಾಷ್ಟ್ರದ ವಾರ್ಧಾದಲ್ಲಿ ಏಪ್ರಿಲ್ 1ರಂದು ಮಾಡಿದ್ದ ಭಾಷಣ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲ ಅಂತ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಹಿಂದೂಗಳು ಬಹುಸಂಖ್ಯಾತರಾಗಿರುವ ಕ್ಷೇತ್ರಗಳಿಂದ ಸ್ಪರ್ಧಿಸುವ ಧೈರ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಅಂತ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಹೇಳಿದ್ದರು. ಈ ಹೇಳಿಕೆಯು ನೀತಿ ಸಂಹಿತೆಯ ಉಲ್ಲಂಘನೆ ಅಲ್ಲ ಅಂತ ಆಯೋಗವು ಸ್ಪಷ್ಟಪಡಿಸಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಜೊತೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದನ್ನು ಉಲ್ಲೇಖಿಸಿ, ದೇಶದ ಬಹುಸಂಖ್ಯಾತ ಸಮುದಾಯದ ಜನರು ಅಲ್ಪಸಂಖ್ಯಾತರಿರುವ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಅಂತ ಮೋದಿ ಹೇಳಿದ್ದರು.ಇದಾದ ಬಳಿಕ ಕಾಂಗ್ರೆಸ್ ಪ್ರಧಾನಿ ಮೋದಿಯವರ ಭಾಷಣದಲ್ಲಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಧ್ವೇಷ ತುಂಬಿದ, ಬಿರುಕು ಮೂಡಿಸುವಂತಹ ಹೇಳಿಕೆಯನ್ನ ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಅಂತ ಆರೋಪಿಸಿ ಆಯೋಗಕ್ಕೆ ದೂರು ನೀಡಿತ್ತು















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ