ವಾರಣಾಸಿ: ಪ್ರಧಾನಿ ಮೋದಿ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಬಿಎಸ್ಎಫ್ ಯೋಧ ತೇಜ್ ಬಹಾದೂರ್ ಯಾದವ್ ಸಲ್ಲಿಸಿದ್ದ ನಾಮಪತ್ರ ಅಮಾನ್ಯಗೊಂಡಿದೆ.
ಈ ಹಿಂದೆ ಉಮೇದುವಾರಿಕೆ ಸಲ್ಲಿಸುವಾಗ ನಾನು ಸರ್ಕಾರಿ ಉದ್ಯೋಗದಿಂದ ವಜಾಗೊಂಡಿದ್ದೇನೆ ಅಂತ ತೇಜ್ ಬಹಾದೂರ್ ಯಾದವ್ ನಮೂದಿಸಿದ್ದರು. ಆದ್ರೆ, ಎರಡನೇ ಬಾರಿ ನಾಮಪತ್ರ ಸಲ್ಲಿಸುವಾಗ ಈ ಮಾಹಿತಿಯನ್ನ ನೀಡದೆ ಹಾಗೆ ಬಿಟ್ಟಿದ್ದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ಮೇ 1ರಂದು ಬೆಳಗ್ಗೆ 11 ಗಂಟೆಯೊಳಗೆ ತಿಳಿಸಿ ಅಂತ ಚುನಾವಣಾ ಆಯೋಗ ತೇಜ್ ಬಹಾದೂರ್ಗೆ ನೋಟಿಸ್ ನೀಡಿತ್ತು. ಆದ್ರೆ ತೇಜ್ ಬಹಾದೂರ್ ಸಕಾಲದಲ್ಲಿ ನೋಟಿಸ್ಗೆ ಉತ್ತರ ನೀಡಿಲ್ಲ. ಹಾಗಾಗಿ ಚುನಾವಣಾ ಆಯೋಗ ಅವರ ನಾಮಪತ್ರವನ್ನು ಅಮಾನ್ಯಗೊಳಿಸಿದೆ. ಆದ್ರೆ, ತಮ್ಮ ನಾಮಪತ್ರ ತಿರಸ್ಕೃತಗೊಂಡಿರೋ ಹಿನ್ನೆಲೆ ತೇಜ್ ಬಹಾದೂರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ. ಇನ್ನು, ಭ್ರಷ್ಟಾಚಾರ ಹಾಗೂ ಅಪ್ರಮಾಣಿಕತೆಯ ಆರೋಪದಡಿ ಕೆಲಸದಿಂದ ವಜಾಗೊಂಡಿರುವ ರಾಜ್ಯ ಅಥವಾ ಕೇಂದ್ರ ಸರ್ಕಾರದ ಉದ್ಯೋಗಿಗಳನ್ನ 5 ವರ್ಷಗಳ ಕಾಲ ಪ್ರಚಾರದಿಂದ ಅನರ್ಹಗೊಳಿಸಬಹುದು.
ಮೊದಲಿಗೆ ತೇಜ್ ಬಹಾದೂರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ರು. ಆದ್ರೆ ಸಮಾಜವಾದಿ ಪಕ್ಷ ಕೊನೆ ಘಳಿಗೆಯಲ್ಲಿ ವಾರಣಾಸಿ ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಬದಲಾಯಿಸಿ ತೇಜ್ ಬಹಾದೂರ್ ಅವರಿಗೆ ಟಿಕೆಟ್ ನೀಡಿತ್ತು.
ಅಂದಹಾಗೆ, ತೇಜ್ ಬಹಾದೂರ್ 2017ರಲ್ಲಿ ಹಿಮಪ್ರದೇಶದಲ್ಲಿರುವ ಭಾರತೀಯ ಸೇನೆಯ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿದೆ ಅಂತ ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟಿದ್ದರು. ಈ ವಿಡಿಯೋ ಕೇಂದ್ರ ಸರ್ಕಾರಕ್ಕೆ ತೀವ್ರ ಮುಜುಗರವುಂಟು ಮಾಡಿತ್ತು. ನಂತರ ತೇಜ್ ಯಾದವ್ರನ್ನ ಸುಳ್ಳು ಆರೋಪ ಹರಡಿದ ಹಿನ್ನೆಲೆ ಕರ್ತವ್ಯದಿಂದ ವಜಾ ಮಾಡಿ ಆದೇಶ ಹೊರಡಿಸಲಾಗಿತ್ತು















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ