ನವದೆಹಲಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಪೊಲೀಸ್ ಅಧಿಕಾರಿಗಳಾದ ಡಿಜಿ ವಂಜಾರಾ ಮತ್ತು ಎನ್ಕೆ ಅಮಿನ್ರನ್ನು ಖುಲಾಸೆಗೊಳಿಸಿದೆ. ಜತೆಗೆ ಅವರ ವಿರುದ್ಧ ಇದ್ದ ಎಲ್ಲಾ ಆರೋಪಗಳಿಂದ ದೋಷಮುಕ್ತ ಗೊಳಿಸಿದೆ. ಏಪ್ರಿಲ್ 30ರಂದು ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು.
ನಕಲಿ ಎನ್ಕೌಂಟರ್ ಆರೋಪದಡಿ ವಿಚಾರಣೆ ಎದುರಿಸುತ್ತಿದ್ದ ಮಾಜಿ ಪೊಲೀಸ್ ಆಫೀಸರ್ಗಳಾದ ಡಿ.ಜಿ.ವಂಜಾರಾ, ಎನ್.ಕೆ.ಅಮಿನ್ ಅವರು ಬಿಡುಗಡೆ ಕೋರಿ ಸಲ್ಲಿಸಿದ್ದ ಮನವಿಯನ್ನು ಈ ಹಿಂದೆ ಗುಜರಾತ್ನ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು.
2004ರಲ್ಲಿ ಅಹಮದಾಬಾದ್ನಲ್ಲಿ ಇಶ್ರತ್ ಜಹಾನ್ ಸೇರಿ ನಾಲ್ವರನ್ನು ಪೊಲೀಸ್ ಅಧಿಕಾರಿಗಳು ಕೊಲೆ ಮಾಡಿ ನಂತರ ಎನ್ಕೌಂಟರ್ ಎಂಬಂತೆ ಬಿಂಬಿಸಿದ್ದರು ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದ್ದರು. ಅಲ್ಲದೆ, ಆ ನಾಲ್ವರಿಗೂ ಉಗ್ರರ ನಂಟು ಇದ್ದು ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯನ್ನು ಕೊಲ್ಲಲು ಪ್ಲಾನ್ ಮಾಡಿದ್ದರಿಂದ ಎನ್ಕೌಂಟರ್ ಮಾಡಿದ್ದೇವೆ ಎಂದು ಹೇಳಿದ್ದರು. ಆದರೆ, ಇಶ್ರತ್ ತಾಯಿ ವಂಜಾರಾ ಮತ್ತು ತಂಡದ ಈ ಆರೋಪವನ್ನು ಅಲ್ಲಗಳೆದಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.
ಪೊಲೀಸ್ ಅಧಿಕಾರಿಗಳಾದ ಡಿ.ಜಿ.ವಂಜಾರಾ, ಎನ್.ಕೆ.ಅಮಿನ್ ಹಾಗೂ ಪಿ.ಪಿ. ಪಾಂಡೆ ಅವರು ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದರು. ಪಿ.ಪಿ.ಪಾಂಡೆ ವಿರುದ್ಧ ಯಾವುದೇ ಸಾಕ್ಷಿ ಸಿಗದ ಕಾರಣ 2018ರ ಫೆಬ್ರವರಿಯಲ್ಲಿ ಅವರನ್ನು ಆರೋಪ ಮುಕ್ತಗೊಳಿಸಲಾಗಿತ್ತು. ಆದರೆ, ವಂಜಾರಾ, ಅಮೀನ್ ವಿರುದ್ಧ ತನಿಖೆ ಜಾರಿಯಲ್ಲಿತ್ತು.
ಈ ಎನ್ಕೌಂಟರ್ ನಕಲಿಯಲ್ಲ. ನಮ್ಮ ವಿರುದ್ಧ ಸಿಬಿಐ ಕೋರ್ಟ್ಗೆ ಸಲ್ಲಿಸಿದ ದಾಖಲೆಗಳು ಸುಳ್ಳು ಎಂದು ನಿವೃತ್ತ ಎಸ್ಪಿ ಅಮಿನ್ ಮನವಿಯಲ್ಲಿ ತಿಳಿಸಿದ್ದರು. ಅಲ್ಲದೆ, ನಿವೃತ್ತ ಡಿಜಿ ಪಿ.ಪಿ.ಪಾಂಡೆಯವರನ್ನು ಯಾವ ಆಧಾರದ ಮೇಲೆ ವಿಚಾರಣೆ ಮಕ್ತಗೊಳಿಸಿದ್ದಿರೋ ಅದೇ ರೀತಿ ನನ್ನನ್ನೂ ಬಿಡುಗಡೆ ಮಾಡಿ. ನಾನೂ ಅವರಂತೆ ಕಾರ್ಯ ನಿರ್ವಹಿಸಿದ್ದೇನೆ ಎಂದು ನಿವೃತ್ತ ಡೆಪ್ಯೂಟಿ ಐಜಿ ವಂಜಾರಾ ಮನವಿ ಸಲ್ಲಿಸಿದ್ದರು.
ಆದರೆ, ಇಶ್ರತ್ ಜಹಾನ್ ಅವರ ತಾಯಿ ಹಾಗೂ ಸಿಬಿಐ ಇವರಿಬ್ಬರ ಮನವಿಗೆ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಈ ಕೊಲೆ ನಡೆದಿದ್ದು ಪೊಲೀಸ್ ಹಾಗೂ ಗಣ್ಯರ ಪಿತೂರಿಯಿಂದ. ಈ ಕೊಲೆಯಲ್ಲಿ ವಂಜಾರಾ ಅವರೇ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಕೆ.ಪಾಂಡ್ಯಾ, ಪೊಲೀಸ್ ಆಫಿಸರ್ಗಳ ಮನವಿ ತಿರಸ್ಕರಿಸಿದ್ದರು. ಆದರೆ ಇದೀಗ ಎರಡೂ ಅಧಿಕಾರಿಗಳಿಗೆ ನ್ಯಾಯಾಲಯದಿಂದ ಕ್ಲೀನ್ ಚಿಟ್ ಸಿಕ್ಕಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ