ನವದೆಹಲಿ,(ಮೇ 03): ಒಡಿಶಾದ ಪುರಿ ಕಡಲತೀರಕ್ಕೆ ಫನಿ ಅಪ್ಪಳಿಸಿದೆ. ಪುರಿ ಜಿಲ್ಲೆಯಲ್ಲಿ ಫನಿ ಅಬ್ಬರಕ್ಕೆ 6 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಫನಿ ರಕ್ಷಣಾ ಕಾರ್ಯಕ್ಕೆ 1000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹಣ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಲಕ್ಷಾಂತರ ಕುಟುಂಬಗಳು ಮನೆ ಕಳೆದುಕೊಂಡಿವೆ. ತಕ್ಷಣಕ್ಕೆ 1000 ಕೋಟಿ ಪರಿಹಾರ ಬಿಡುಗಡೆ ಮಾಡಿದ್ದೇವೆ. ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. ಫನಿ ಚಂಡಮಾರುತ ಕುರಿತು ಪ್ರಧಾನಿ ಮೋದಿ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ.
ಗಂಟೆಗೆ 200 ಕಿಮೀ ವೇಗದಲ್ಲಿ ಫನಿ ಸೈಕ್ಲೋನ್ ಆರ್ಭಟಿಸುತ್ತಿದ್ದು. ಚಂಡಮಾರುತದ ಅಬ್ಬರಕ್ಕೆ ಮರಗಳು ಧರೆಗುರುಳುತ್ತಿವೆ. ಮುಂಜಾಗ್ರತೆಯಿಂದ ಒಟ್ಟು 11 ಲಕ್ಷ ಜನರ ಸ್ಥಳಾಂತರ ಮಾಡಲಾಗಿದ್ದು, ಶಾಲಾ, ಕಾಲೇಜುಗಳಲ್ಲಿ ನಿರಾಶ್ರಿತರಿಗೆ ಆಶ್ರಯ ನೀಡಲಾಗಿದೆ.
ಚಂಡಮಾರುತದಿಂದ ಹಲವೆಡೆ ಭೂ ಕುಸಿತ ಉಂಟಾಗಿದ್ದು, ಜನ ಆತಂಕದಲ್ಲಿದ್ದಾರೆ. ಒಡಿಶಾದ 11 ಜಿಲ್ಲೆಗಳ 10 ಸಾವಿರ ಗ್ರಾಮಗಳಲ್ಲಿ ಫನಿ ಅಬ್ಬರ ಹೆಚ್ಚಾಗಿದ್ದು, 91 NDRF, 8 ಕೋಸ್ಟಲ್ ಗಾರ್ಡ್ ತಂಡಗಳನ್ನ ನಿಯೋಜಿಸಲಾಗಿದೆ. ಇನ್ನು, ಭುವನೇಶ್ವರ, ಕೋಲ್ಕತಾ ಏರ್ಪೋರ್ಟ್ ಬಂದ್ ಆಗಿದ್ದು. 157ಕ್ಕೂ ಹೆಚ್ಚು ರೈಲು ಸಂಚಾರ ಸ್ಥಗಿತವಾಗಿದೆ. ಕಳೆದ 20 ವರ್ಷಗಳಲ್ಲೇ ಒಡಿಶಾ ಕಂಡಂತಹ ಅತ್ಯಂತ ಭೀಕರ ಚಂಡಮಾರುತ ಇದಾಗಿದೆ.
ಇನ್ನಷ್ಟು ಸುದ್ದಿಗಳು
ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ ಪ್ರಮಾಣ ವಚನ ಸ್ವೀಕಾರ
ಭಾರತೀಯ ಮಣ್ಣಲ್ಲಿ ಹಳ್ಳಿ ನಿರ್ಮಿಸಿದ ಚೀನಾ- ಪ್ರಧಾನಿ ಮೌನವೇಕೆ?
ಟ್ರಂಪ್ ವಿದಾಯ ಭಾಷಣ- ಹೊಸ ಸರ್ಕಾರಕ್ಕೆ ಶುಭ ಹಾರೈಕೆ
ಗೋರಕ್ಷಕರ ಮೇಲಿನ ಎಲ್ಲಾ ಪ್ರಕರಣಗಳು ವಾಪಸ್- ಪಶು ಸಂಗೋಪನೆ ಸಚಿವ
ಉಮ್ರಾ ಯಾತ್ರಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ- ಸೌದಿ ಹಜ್, ಉಮ್ರಾ ಸಚಿವ
ಸುರತ್ಕಲ್: ಸೋಶಿಯಲ್ ಮೀಡಿಯಾ ಮೂಲಕ ಹನಿಟ್ರ್ಯಾಪ್- ನಾಲ್ವರ ಬಂಧನ