ನವದೆಹಲಿ,(ಮೇ 03): ಒಡಿಶಾದ ಪುರಿ ಕಡಲತೀರಕ್ಕೆ ಫನಿ ಅಪ್ಪಳಿಸಿದೆ. ಪುರಿ ಜಿಲ್ಲೆಯಲ್ಲಿ ಫನಿ ಅಬ್ಬರಕ್ಕೆ 6 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಫನಿ ರಕ್ಷಣಾ ಕಾರ್ಯಕ್ಕೆ 1000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹಣ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಲಕ್ಷಾಂತರ ಕುಟುಂಬಗಳು ಮನೆ ಕಳೆದುಕೊಂಡಿವೆ. ತಕ್ಷಣಕ್ಕೆ 1000 ಕೋಟಿ ಪರಿಹಾರ ಬಿಡುಗಡೆ ಮಾಡಿದ್ದೇವೆ. ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. ಫನಿ ಚಂಡಮಾರುತ ಕುರಿತು ಪ್ರಧಾನಿ ಮೋದಿ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ.
ಗಂಟೆಗೆ 200 ಕಿಮೀ ವೇಗದಲ್ಲಿ ಫನಿ ಸೈಕ್ಲೋನ್ ಆರ್ಭಟಿಸುತ್ತಿದ್ದು. ಚಂಡಮಾರುತದ ಅಬ್ಬರಕ್ಕೆ ಮರಗಳು ಧರೆಗುರುಳುತ್ತಿವೆ. ಮುಂಜಾಗ್ರತೆಯಿಂದ ಒಟ್ಟು 11 ಲಕ್ಷ ಜನರ ಸ್ಥಳಾಂತರ ಮಾಡಲಾಗಿದ್ದು, ಶಾಲಾ, ಕಾಲೇಜುಗಳಲ್ಲಿ ನಿರಾಶ್ರಿತರಿಗೆ ಆಶ್ರಯ ನೀಡಲಾಗಿದೆ.
ಚಂಡಮಾರುತದಿಂದ ಹಲವೆಡೆ ಭೂ ಕುಸಿತ ಉಂಟಾಗಿದ್ದು, ಜನ ಆತಂಕದಲ್ಲಿದ್ದಾರೆ. ಒಡಿಶಾದ 11 ಜಿಲ್ಲೆಗಳ 10 ಸಾವಿರ ಗ್ರಾಮಗಳಲ್ಲಿ ಫನಿ ಅಬ್ಬರ ಹೆಚ್ಚಾಗಿದ್ದು, 91 NDRF, 8 ಕೋಸ್ಟಲ್ ಗಾರ್ಡ್ ತಂಡಗಳನ್ನ ನಿಯೋಜಿಸಲಾಗಿದೆ. ಇನ್ನು, ಭುವನೇಶ್ವರ, ಕೋಲ್ಕತಾ ಏರ್ಪೋರ್ಟ್ ಬಂದ್ ಆಗಿದ್ದು. 157ಕ್ಕೂ ಹೆಚ್ಚು ರೈಲು ಸಂಚಾರ ಸ್ಥಗಿತವಾಗಿದೆ. ಕಳೆದ 20 ವರ್ಷಗಳಲ್ಲೇ ಒಡಿಶಾ ಕಂಡಂತಹ ಅತ್ಯಂತ ಭೀಕರ ಚಂಡಮಾರುತ ಇದಾಗಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ