ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ವತಿಯಿಂದ ಗಾಂಧಿನಗರ ಸುನ್ನೀ ಸೆಂಟರಿನಲ್ಲಿ ಡಿವಿಷನ್ ಅಧ್ಯಕ್ಷರಾದ ಜಿ.ಕೆ ಇಬ್ರಾಹಿಂ ಅಂಜದಿಯವರ ಅಧ್ಯಕ್ಷತೆಯಲ್ಲಿ ಮುತಅಲ್ಲಿಂ ವಿದ್ಯಾರ್ಥಿಗಳಿಗಾಗಿ ದಅವಾ ಕಾನ್ಫರೆನ್ಸ್ ನಡೆಯಿತು.

ಎಸ್.ಎಸ್.ಎಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ದಅವಾ ಕನ್ವೀನರ್ ಮುನೀರ್ ಸಖಾಫಿ ಉಳ್ಳಾಲ ತರಬೇತಿ ನೀಡಿದರು. ಡಿವಿಷನ್ ದಅವಾ ಕನ್ವೀನರ್ ಅಬ್ದುಲ್ ಕಲಾಂ ಝುಹ್ರಿ ಬೆಳ್ಳಾರೆ ಉದ್ಘಾಟಿಸಿದರು. ಈ ವರ್ಷ ಪದವೀಧರರಾಗಿ ವಿವಿಧ ಕಾಲೇಜುಗಳಿಂದ ಸೇವಾರಂಗಕ್ಕಿಳಿದ ತಾಲೂಕಿನ ಯುವ ವಿದ್ವಾಂಸರನ್ನು ಅಭಿನಂದಿಸಲಾಯಿತು.

ಎಸ್.ಎಸ್.ಎಫ್ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಫೈಝಲ್ ಝುಹ್ರಿ ಕಲ್ಲುಗುಂಡಿ, ಕೆ.ಸಿ.ಎಫ್ ಅಬುಧಾಬಿ ಘಟಕದ ಅಧ್ಯಕ್ಷರಾದ ಹಸೈನಾರ್ ಅಮಾನಿ, ಡಿವಿಷನ್ ಮಾಜಿ ಅಧ್ಯಕ್ಷರಾದ ಅಶ್ರಫ್ ಸಖಾಫಿ ಕುಂಬಕ್ಕೋಡು, ಡಿವಿಷನ್ ಪ್ರಧಾನ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ಶುಭ ಹಾರೈಸಿ ಮಾತನಾಡಿದರು. ದಅವಾ ಸಮಿತಿ ಚೆಯರ್ಮೇನ್ ಮುಖ್ತಾರ್ ಮೇನಾಲ ಅಭಿನಂದನಾ ಭಾಷಣ ನಡೆಸಿದರು. ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಕಟ್ಟೆಕ್ಕಾರ್ಸ್, ಡಿವಿಷನ್ ಉಪಾಧ್ಯಕ್ಷ ಸಿದ್ದೀಖ್ ಗೂನಡ್ಕ, ಕೋಶಾಧಿಕಾರಿ ಹಸೈನಾರ್ ನೆಕ್ಕಿಲ, ರೈಟ್ ಟೀಂ ಕನ್ವೀನರ್ ಜಬ್ಬಾರ್ ಹನೀಫಿ ನಿಂತಿಕಲ್ಲು ಮುಖ್ಯಾತಿಥಿಗಳಾಗಿ ಭಾಗವಹಿಸಿದರು.
ದಅವಾ ಸಮಿತಿ ಕನ್ವೀನರ್ ಸ್ವಾದಿಖ್ ಹಿಮಮಿ ಸ್ವಾಗತಿಸಿ, ಸಾಬಿತ್ ಪಾಣಾಜೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ