ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ವತಿಯಿಂದ ಗಾಂಧಿನಗರ ಸುನ್ನೀ ಸೆಂಟರಿನಲ್ಲಿ ಡಿವಿಷನ್ ಅಧ್ಯಕ್ಷರಾದ ಜಿ.ಕೆ ಇಬ್ರಾಹಿಂ ಅಂಜದಿಯವರ ಅಧ್ಯಕ್ಷತೆಯಲ್ಲಿ ಮುತಅಲ್ಲಿಂ ವಿದ್ಯಾರ್ಥಿಗಳಿಗಾಗಿ ದಅವಾ ಕಾನ್ಫರೆನ್ಸ್ ನಡೆಯಿತು.

ಎಸ್.ಎಸ್.ಎಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ದಅವಾ ಕನ್ವೀನರ್ ಮುನೀರ್ ಸಖಾಫಿ ಉಳ್ಳಾಲ ತರಬೇತಿ ನೀಡಿದರು. ಡಿವಿಷನ್ ದಅವಾ ಕನ್ವೀನರ್ ಅಬ್ದುಲ್ ಕಲಾಂ ಝುಹ್ರಿ ಬೆಳ್ಳಾರೆ ಉದ್ಘಾಟಿಸಿದರು. ಈ ವರ್ಷ ಪದವೀಧರರಾಗಿ ವಿವಿಧ ಕಾಲೇಜುಗಳಿಂದ ಸೇವಾರಂಗಕ್ಕಿಳಿದ ತಾಲೂಕಿನ ಯುವ ವಿದ್ವಾಂಸರನ್ನು ಅಭಿನಂದಿಸಲಾಯಿತು.

ಎಸ್.ಎಸ್.ಎಫ್ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಫೈಝಲ್ ಝುಹ್ರಿ ಕಲ್ಲುಗುಂಡಿ, ಕೆ.ಸಿ.ಎಫ್ ಅಬುಧಾಬಿ ಘಟಕದ ಅಧ್ಯಕ್ಷರಾದ ಹಸೈನಾರ್ ಅಮಾನಿ, ಡಿವಿಷನ್ ಮಾಜಿ ಅಧ್ಯಕ್ಷರಾದ ಅಶ್ರಫ್ ಸಖಾಫಿ ಕುಂಬಕ್ಕೋಡು, ಡಿವಿಷನ್ ಪ್ರಧಾನ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ಶುಭ ಹಾರೈಸಿ ಮಾತನಾಡಿದರು. ದಅವಾ ಸಮಿತಿ ಚೆಯರ್ಮೇನ್ ಮುಖ್ತಾರ್ ಮೇನಾಲ ಅಭಿನಂದನಾ ಭಾಷಣ ನಡೆಸಿದರು. ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಕಟ್ಟೆಕ್ಕಾರ್ಸ್, ಡಿವಿಷನ್ ಉಪಾಧ್ಯಕ್ಷ ಸಿದ್ದೀಖ್ ಗೂನಡ್ಕ, ಕೋಶಾಧಿಕಾರಿ ಹಸೈನಾರ್ ನೆಕ್ಕಿಲ, ರೈಟ್ ಟೀಂ ಕನ್ವೀನರ್ ಜಬ್ಬಾರ್ ಹನೀಫಿ ನಿಂತಿಕಲ್ಲು ಮುಖ್ಯಾತಿಥಿಗಳಾಗಿ ಭಾಗವಹಿಸಿದರು.
ದಅವಾ ಸಮಿತಿ ಕನ್ವೀನರ್ ಸ್ವಾದಿಖ್ ಹಿಮಮಿ ಸ್ವಾಗತಿಸಿ, ಸಾಬಿತ್ ಪಾಣಾಜೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ