ಕೊಲಂಬೋ (ಮೇ.4) : ಶ್ರೀಲಂಕಾದಲ್ಲಿ ಏಪ್ರಿಲ್ 21 ರ ಈಸ್ಟರ್ ಭಾನುವಾರದ ದಿನದ ಪ್ರಾರ್ಥನೆ ಸಮಯದಲ್ಲಿ ಚರ್ಚ್ನಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟಿಸುವ ಮೂಲಕ 250 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣರಾದ ಭಯೋತ್ಪಾದಕರು ದಾಳಿಗೂ ಮುನ್ನ ಭಾರತದಲ್ಲಿ ತರಬೇತಿ ಪಡೆದಿದ್ದಾರೆ ಎಂದು ಶ್ರೀಲಂಕಾ ಸೇನಾ ಮುಖ್ಯಸ್ಥ ಮಹೇಶ್ ಸೇನಾನಾಯಕ ಆರೋಪಿಸಿದ್ದಾರೆ.
ಅಂತಾರಾಷ್ಟ್ರೀಯ ಬಿಬಿಸಿ ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿರುವ ಶ್ರೀಲಂಕಾ ಸೇನಾ ಮುಖ್ಯಸ್ಥ ಮಹೇಶ್ ಸೇನಾನಾಯಕ, “ಲಂಕಾದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿರುವ ಉಗ್ರರು ದಾಳಿಗೂ ಮುಂಚೆ ಭಾರತದ ಬೆಂಗಳೂರು ಕೇರಳ ಹಾಗೂ ಕಾಶ್ಮೀರದಲ್ಲಿ ಉಗ್ರರಿಂದ ತರಬೇತಿ ಪಡೆದಿರುವ ಸಾಧ್ಯತೆ ಇದೆ. ಈ ಕುರಿತು ಗೂಢಚಾರಿ ಇಲಾಖೆಗೆ ಮಾಹಿತಿ ಲಭ್ಯವಾಗಿದೆ” ಎಂದು ಅವರು ತಿಳಿಸಿದ್ದಾರೆ.
“ರಿಯಾಝ್ ಅಬುಬಕ್ಕರ್ ಎಂಬ ಉಗ್ರನನ್ನು ಬಂಧಿಸಿದ ನಂತರ ಈ ದಾಳಿಯ ಹಿಂದೆ ಇಸ್ಲಾಮಿಕ್ ಸ್ಟೇಟ್ ಉಗ್ರರ ಕೈವಾಡ ಇರುವ ಕುರಿತ ಮಾಹಿತಿ ಖಚಿತವಾಗಿತ್ತು. ಅಲ್ಲದೆ ಶ್ರೀಲಂಕಾದ ರಾಷ್ಟ್ರೀಯ ತನಿಖಾ ದಳ ತಮಿಳುನಾಡಿನಲ್ಲಿ ಸಾಕಷ್ಟು ದಾಳಿಗಳನ್ನು ಸಂಘಟಿಸಿದ್ದು, ಇಸ್ಲಾಮಿಕ್ ಸ್ಟೇಟ್ ಉಗ್ರರು ತಮಿಳುನಾಡಿನಿಂದ ಲಂಕಾ ದಾಳಿಯನ್ನು ಸಂಘಟಿಸಿದ್ದಾರೆ. ಅಲ್ಲದೆ ತಮಿಳುನಾಡಿನಲ್ಲಿ ಸಾಕಷ್ಟು ಸಂಖ್ಯೆಯ ಸ್ಲೀಪರ್ ಸೆಲ್ಗಳು ಕಾರ್ಯನಿರತರಾಗಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ” ಎಂದಿದ್ದಾರೆ.
ಅಲ್ಲದೆ “ಉಗ್ರ ರಿಯಾಝ್ ಅಬುಬಕ್ಕರ್ ಹಾಗೂ ಆತ್ಮಹತ್ಯಾ ಬಾಂಬರ್ಗಳಾದ ಝಹ್ರಾನ್ ಹಾಶಿಮ್ ಶ್ರೀಲಂಕಾದಲ್ಲಿ ಬಾಂಬ್ ದಾಳಿ ಸಂಘಟಿಸುವ ಮುನ್ನ ಕೇರಳದಲ್ಲಿ ತರಬೇತಿ ಪಡೆದಿದ್ದರು. ಈ ಕುರಿತು ಗೂಢಚಾರಿ ಇಲಾಖೆ ಸಾಕ್ಷಿ ಸಮೇತ ಮಾಹಿತಿ ನೀಡಿದೆ” ಎಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 21 ರಂದು ಉಗ್ರಗಾಮಿಗಳು ಶ್ರೀಲಂಕಾದ ಚರ್ಚ್ ಮೇಲೆ ಸಂಘಟಿಸಿದ್ದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. ಈ ದಾಳಿಗೆ ಶ್ರೀಲಂಕಾ ರಕ್ಷಣಾ ವ್ಯವಸ್ಥೆಯೇ ಕಾರಣ ಎಂದು ಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ದೂಷಿಸಿದ್ದರು.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್