ನವದೆಹಲಿ,ಮೇ.5:- ಸೋರಿಕೆಯಾದ ರಕ್ಷಣಾ ಗುಪ್ತ ದಾಖಲೆಗಳ ಪ್ರಕಟಣೆ ಅಪರಾಧವಲ್ಲ ಎನ್ನುವಂತೆ. ಅಪರಾಧ ಕಾನೂನುಗಳಿಗೆ ವಿನಾಯಿತಿ ನೀಡುವುದು. ದೇಶದ ಭದ್ರತೆ ದೃಷ್ಟಿಯಿಂದ ಭಾರಿ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಕೇಂದ್ರ ಸರ್ಕಾರ ಶನಿವಾರ ಸುಪ್ರೀಂ ನ್ಯಾಯಪೀಠವನ್ನು ಎಚ್ಚರಿಸಿದೆ.
ರಫೇಲ್ ಯುದ್ಧ ವಿಮಾನಗಳ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದ ಸೋರಿಕೆಯಾದ ದಾಖಲೆಗಳನ್ನು ಈ ಪ್ರಕರಣದ ಮರು ಪರಿಶೀಲನೆಗಾಗಿ ಸುಪ್ರೀಂ ನ್ಯಾಯಪೀಠ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಶನಿವಾರ ಕೇಂದ್ರ ಸರ್ಕಾರ ಸುಪ್ರೀಂ ನ್ಯಾಯಪೀಠವನ್ನು ನಯವಾಗಿ ಎಚ್ಚರಿಸಿದೆ.
ರಫೇಲ್ ಕುರಿತಂತೆ ಸೋರಿಕೆಯ ದಾಖಲೆಗಳನ್ನು ಪುರಾವೆಯಾಗಿ ಸ್ವೀಕರಿಸಬಾರದು ಎಂದು ಕೇಂದ್ರ ಸರ್ಕಾರ ಮಂಡಿಸಿದ್ದ ವಾದವನ್ನು ಸುಪ್ರೀಂ ನ್ಯಾಯಪೀಠ ತಿರಸ್ಕರಿಸಿತ್ತು ಮತ್ತು ಆ ದಾಖಲೆಗಳನ್ನು ಮಾನ್ಯ ಮಾಡಿದ್ದ ಪೀಠ ಅವುಗಳ ಆಧಾರದಲ್ಲಿ ಪ್ರಕರಣದ ಪುನರ್ ಪರಿಶೀಲಿಸಿ ರಫೇಲ್ ವ್ಯವಹಾರ ಸರಿ ಇದೆ ಈ ಒಪ್ಪಂದದಲ್ಲಿ ಯಾವುದೇ ಲೋಪ ಆಗಿಲ್ಲ ಎಂದು 2018ರ ಡಿಸೆಂಬರ್ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಆದರೆ ಈ ತೀರ್ಪಿನ ಮರು ಪರಿಶೀಲನೆ ನಡೆಸಲು ಕೋರಿ ಕೇಂದ್ರದ ಮಾಜಿ ಸಚಿವ ಅರುಣ್ ಶೌರಿ, ಯಶ್ವಂತ್ ಸಿನ್ಹಾ ಮತ್ತು ವಕೀಲ ಪ್ರಶಾಂತ್ ಭೂಷಣ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು ಮತ್ತು ರಫೇಲ್ ವ್ಯವಹಾರ ಕುರಿತ ಸೋರಿಕೆಯಾದ ದಾಖಲೆಗಳನ್ನು ಒದಗಿಸಿದ್ದರು.
ಇದನ್ನು ಸುಪ್ರೀಂ ನ್ಯಾಯಪೀಠ ಮಾನ್ಯ ಮಾಡಿ ಮರು ಪರಿಶೀಲನೆ ನಡೆಸುವುದಾಗಿ ಹೇಳಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ