ಬೆಂಗಳೂರು(ಮೇ.05): ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಾವಿನ ಕುರಿತಾದ ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೆ ರಾಜೀವ್ ಗಾಂಧಿ ಬದುಕು ಅಂತ್ಯವಾಯಿತು ಎಂಬ ಮೋದಿ ಹೇಳಿಕೆ ಖಂಡನಾರ್ಹ. ಇದು ಕೇವಲ ತುಚ್ಛ ಹೇಳಿಕೆಯಲ್ಲ. ಜತೆಗೆ ಪ್ರಧಾನಿಗಳ ಮನಸ್ಥಿತಿ ಹೇಗಿದೆ ಎಂಬುದನ್ನು ತೋರಿಸುತ್ತದೆ. ಚುನಾವಣೆ ಫಲಿತಾಂಶಕ್ಕೆ ಮುನ್ನವೇ ಸೋಲುವ ಭೀತಿಯಲ್ಲಿ ಮೋದಿ ಹತಾಶರಾಗಿದ್ದಾರೆ ಎನ್ನುವುದಕ್ಕೆ ಇದೇ ಉದಾಹರಣೆ ಎಂದು ಕುಟುಕಿದ್ದಾರೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು, ರಾಜೀವ್ ಗಾಂಧಿ ಬದುಕು ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೆ ಅಂತ್ಯವಾಯಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಭಾರಿ ವಿರೋಧ ವ್ಯಕ್ತವಾಗಿತ್ತು.
ಬಳಿಕ ಮೋದಿಯವರ ಹೇಳಿಕೆಗೆ ಟ್ವೀಟ್ ಮೂಲಕ ಉತ್ತರಿಸಿದ್ದ ರಾಹುಲ್ ಗಾಂಧಿ ಕೂಡ, ಚುನಾವಣೆ ಯುದ್ಧ ಮುಗಿದಿದೆ. ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ. ಗೆಲ್ಲುವ ನಂಬಿಕೆ ಕಳೆದುಕೊಂಡು ಹತಾಶೆಯಲ್ಲಿ ನೀವು ನಮ್ಮ ತಂದೆ ಬಗ್ಗೆ ಏನೇ ಹೇಳಿಕೆ ನೀಡಿದರೂ ನಿಮಗೆ ಸಹಾಯವಾಗುವುದಿಲ್ಲ.ಅದೇನೆ ಇರಲಿ, ನಾನು ಮಾತ್ರ ನಿಮಗೆ ಪ್ರೀತಿ ತುಂಬಿದ ದೊಡ್ಡ ಅಪ್ಪುಗೆ’ ನೀಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
ಈ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿಯವರು ಕೂಡ ಪ್ರತಿಕ್ರಿಯಿಸಿದ್ದು, ಹುತಾತ್ಮರ ಹೆಸರಲ್ಲಿ ಮತ ಕೇಳುವ ಮೋದಿ ಮತ್ತೊಬ್ಬ ಹುತಾತ್ಮ ವ್ಯಕ್ತಿಗೆ ಅವಮಾನ ಮಾಡಿದ್ದಾರೆ. ಇದಕ್ಕೆ ಅಮೇಥಿಯ ಜನ ತಕ್ಕ ಉತ್ತರ ನೀಡಲಿದ್ದಾರೆ. ನನ್ನ ತಂದೆ ಅಮೇಥಿಯ ಜನರಿಗಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮಾಜಿ ಹಣಕಾಸು ಮಂತ್ರಿ ಪಿ.ಚಿದಂಬರಂ, ಕಾಂಗ್ರೆಸ್ ವಕ್ತಾರ ಸ್ಯಾಮ್ ಪಿತ್ರೋಡಾ, ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಮೋದಿಯವರ ರಾಜೀವ್ ಗಾಂಧಿ ಬಗೆಗಿನ ಹೇಳಿಕೆಯನ್ನು ಖಂಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ