ಮುಂಬೈ: ಈ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ ಎಂಬ ಅದೇ ಪಕ್ಷದ ನಾಯಕ ರಾಮ್ ಮಾಧವ್ ಅವರ ಮಾತಿಗೆ ಮಹಾರಾಷ್ಟ್ರದ ಮಿತ್ರ ಪಕ್ಷ ಶಿವಸೇನೆ ಕೂಡ ಧ್ವನಿಗೂಡಿಸಿದೆ.
ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಶಿವಸೇನೆಯ ನಾಯಕ ಸಂಜಯ್ ರಾವತ್, ‘ಬಿಜೆಪಿಗೆ ಸರಳ ಬಹುಮತ ಸಿಗುವ ಸಾಧ್ಯತೆಗಳು ಕಡಿಮೆ. ಸರ್ಕಾರ ರಚನೆ ಮಾಡಲು ಬಿಜೆಪಿ ಇತರ ಪಕ್ಷಗಳನ್ನು ಅವಲಂಭಿಸಲೇಬೇಕು,’ ಎಂದು ಅವರು ಹೇಳಿದ್ದಾರೆ.
‘ಬಿಜೆಪಿ ನಾಯಕ ರಾಮ್ ಮಾಧವ್ ಅವರ ಅಭಿಪ್ರಾಯ ಸರಿ. ಕೇಂದ್ರದಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದೆ. ಬಿಜೆಪಿ ಬಹುದೊಡ್ಡ ಪಕ್ಷವಾಗಲಿದೆ. ಆದರೆ, ಈಗಿನ ಪರಿಸ್ಥಿತಿ ಅವಲೋಕಿಸಿದರೆ ಬಿಜೆಪಿ 280–282ರ ಗುರಿ ಮಟ್ಟುವುದು ಕಷ್ಟ ಸಾಧ್ಯ. ಆದರೆ, ಎನ್ಡಿಎ ಪರಿವಾರವು ಸರಳ ಬಹುಮತದ ಗಡಿ ದಾಟಲಿದೆ,’ ಎಂದು ರಾವತ್ ಹೇಳಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಅವರು ಸೋಮವಾರ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ಸರ್ಕಾರ ರಚನೆ ಮಾಡಲು ಬಿಜೆಪಿಗೆ ಮೈತ್ರಿ ಪಕ್ಷಗಳ ನೆರವು ಅಗತ್ಯವಾಗಲಿದೆ. ಆದರೆ, 271 ಸ್ಥಾನಗಳನ್ನು ನಾವು ಸ್ವತಂತ್ರವಾಗಿ ಗಳಿಸಿದರೆ ಅದು ನಮಗೆ ಸಂತೋಷ ನೀಡಲಿದೆ. ಆದರೆ, ಎನ್ಡಿಎ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ,’ ಎಂದು ಹೇಳಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ