ಮದೀನಾ ಮುನವ್ವರ: ಸೌದಿ ಅರೇಬಿಯಾದಲ್ಲಿ ಅಪಘಾತಕ್ಕೊಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡಿನ ಶಂಕರ್ ಎಂಬ ಹಿಂದೂ ಸಹೋದರನಿಗೆ ಕರ್ನಾಟಕದ ಕೆ.ಸಿ.ಎಫ್ ತಂಡ ಆಸರೆಯಾಗಿದೆ.
ತಮಿಳುನಾಡಿನ ನಾಗರಕೊಯಿಲ್ ನಿವಾಸಿ ಶಂಕರ್ ಅವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸೌದಿ ಅರೇಬಿಯಾಕೆ ತಾತ್ಕಾಲಿಕ ವೀಸಾದಲ್ಲಿ ಬಂದು ಎರಡು ದಿನಗಳ ಬಳಿಕ ಶಂಕರ್ ಕೆಲಸ ಮಾಡುತ್ತಿದ್ದ ಕಂಪೆನಿಯು ಅವರನ್ನು ಜಿದ್ದಾದಿಂದ ಹಫರುಲ್ ಬಾತಿನ್ ಎಂಬಲ್ಲಿಗೆ ಕಳುಹಿಸಿದ ಕಾರು ರಾತ್ರಿ ಸುಮಾರು 9ರ ಹೊತ್ತಿಗೆ ಮದೀನಾ ಸಮೀಪದ ಬನಿ ಮುಹಯ್ಯ ಎಂಬಲ್ಲಿ ಘನವಾಹನವೊಂದರ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಪಾಕಿಸ್ತಾನದ ಪ್ರಜೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಂಕರ್ ಗಂಭೀರವಾಗಿ ಗಾಯಗೊಂಡು, ಮದೀನಾದ ಕಿಂಗ್ ಫಹದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಯಲ್ಲಿದ್ದ ಮೋಹನ್ ಎಂಬವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿದ ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್ ತಂಡವು, ಅಸಹಾಯಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಶಂಕರ್ ಅವರನ್ನು ಭೇಟಿಯಾಗಿ, ಅವಶ್ಯಕತೆಗಳನ್ನು ಪೂರೈಸಿ ಸಾಂತ್ವನ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.
ಕಳೆದ ಐದಾರು ವರ್ಷಗಳಿಂದ ಹಜ್ಜ್ , ಉಮ್ರಾ ಯಾತ್ರಾರ್ಥಿಗಳಿಗೆ ಹಾಗೂ ಅರಬ್ ದೇಶದಲ್ಲಿ ನೆಲೆಸಿರುವ ಕರ್ನಾಟಕದ ಅನಿವಾಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಕೆ.ಸಿ.ಎಫ್ ಸಂಘಟನೆಯು ಎಲ್ಲಾ ಜಾತಿ ಧರ್ಮದ ಜನರ ಪ್ರಶಂಸೆಗೆ ಪಾತ್ರವಾಗಿದೆ.
ಪವಿತ್ರ ಉಮ್ರಾ ಕರ್ಮ ನಿರ್ವಹಿಸಿ ಮದೀನಾ ಝಿಯಾರತ್ ಗೆ ಆಗಮಿಸಿದ ಕರ್ನಾಟಕದ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್, ಕೆ.ಸಿ.ಎಫ್ ಕಾರ್ಯಕರ್ತರ ಜೊತೆಗೆ ಮದೀನಾದ ಕಿಂಗ್ ಫಹದ್ ಆಸ್ಪತ್ರೆಗೆ ಭೇಟಿ ನೀಡಿ, ಶಂಕರ್ ರ ಆರೋಗ್ಯ ವಿಚಾರಿಸಿ ಸಾಂತ್ವನ ಪಡಿಸೀದರು.ಜಾತಿ, ಧರ್ಮ ಬೇಧವಿಲ್ಲದೆ ಎಲ್ಲರ ಸೇವೆಯಲ್ಲಿ ತೊಡಗಿರುವ ಕೆಸಿಎಫ್ ಕಾರ್ಯಕರ್ತರ ಕೆಲಸವನ್ನು ಶ್ಲಾಘಿಸಿದರು. ಹಜ್ಜ್ ಹಾಗೂ ಉಮ್ರಾಕೆ ಆಗಮಿಸುವ ಹಜ್ಜಾಜಿಗಳ ಸೇವೆ ಮಾಡುತ್ತಿದ್ದು ಕನ್ನಡಿಗರಿಗೆ ಹೆಮ್ಮೆಯಾಗಿದೆ. ಕರ್ನಾಟಕ ಸರಕಾರದ ಪರವಾಗಿ ಕೆಸಿಎಫ್ ನ ಎಲ್ಲಾ ಸದಸ್ಯರನ್ನು ಅಭಿನಂದಿಸುತ್ತಿರುವುದಾಗಿ ತಿಳಿಸಿದರು.
ನಿಯೋಗದಲ್ಲಿ ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್ ಸಾಂತ್ವನ ತಂಡದ ಪ್ರಮುಖರಾಗಿರುವ ತಾಜುದ್ದೀನ್ ಸುಳ್ಯ, ರಝಾಕ್ ಉಳ್ಳಾಳ್, ಜಬ್ಬಾರ್ ಕಾವಳಕಟ್ಟೆ, ಹುಸೈನಾರ್ ಮಾಪಲ್, ಆಶ್ರಫ್ ಸಖಾಫಿ ನೂಜಿ, ಆಸಿಫ್ ಬದ್ಯಾರ್, ಹಮೀದ್ ಕಲ್ಲರ್ಬೆ, ಆಸೀಫ್ ಅಮಾಕೊ ಸಹಿತ ಸೆಕ್ಟರ್ ಸಮಿತಿಯ ಕಾರ್ಯಕರ್ತರು ಜೊತೆಯಲ್ಲಿದ್ದರು.
ವರದಿ:
ಆಸೀಫ್ ಬದ್ಯಾರ್, ಮದೀನಾ ಮುನವ್ವರ















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ