ಹೂಹಾಕುವಕಲ್ಲು ಶಾಖೆಯು ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಅರ್ಹ ಕುಟುಂಬಗಳಿಗೆ ಅಗತ್ಯ ದಿನಸಿ ಸಾಮಾನುಗಳನ್ನು ಒಳಗೊಂಡ ಸುಮಾರು 53 ರಷ್ಟು ಬಹು ವೆಚ್ಚದ ರಮಳಾನ್ ವಿಶೇಷ ಕಿಟ್ ವಿತರಿಸಲಾಯಿತು.

ಶಾಖೆಯ ಮುಂಭಾಗದಲ್ಲಿ ನಡೆದ ಸರಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು SYS ಬ್ರಾಂಚ್ ಅಧ್ಯಕ್ಷರಾದ ಮೊಹಿದಿನ್ ಕುಂಞಿ ತೋಟಾಲ್ ವಹಿಸಿದ್ದರು. ಬದ್ರಿಯಾ ಜುಮಾ ಮಸ್ಜಿದ್ ಹೂಹಾಕುವಕಲ್ಲು ಖತೀಬರಾದ ಬಹು! ರಫೀಕ್ ಅಹ್ಸನಿ ಕಕ್ಕೆಪದವು ಉಸ್ತಾದರು ಉದ್ಘಾಟಿಸುತ್ತಾ ಶಾಖೆಯ ಸಾಂತ್ವನ ಕಾರ್ಯಕ್ರಮಗಳನ್ನು ಪ್ರಶಂಸಿದರು.
ಕಾರ್ಯಕ್ರಮಕ್ಕೆ ಬಾಳೆಪುಣಿ ಸೆಕ್ಟರ್ ಅಧ್ಯಕ್ಷರಾದ ಸಿದ್ದೀಕ್ ಸಖಾಫಿ ಕಾಯಾರ್, ಪ್ರ.ಕಾರ್ಯದರ್ಶಿ ಝೈನುದ್ದೀನ್ ಇರಾ ಶುಭ ಹಾರೈಸಿದರು. ಶಾಖಾ ಅಧ್ಯಕ್ಷ ಉಸ್ಮಾನ್ ಎನ್ ಸೇರಿದಂತೆ ಹಲವು ಶಾಖಾ ನಾಯಕರು ಉಪಸ್ಥಿತರಿದ್ದರು. ಕಿಟ್ ಗಳನ್ನು ಅರ್ಹರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿತ್ತು.
ಪ್ರತಿ ವರ್ಷವೂ ಹೂಹಾಕುವಕಲ್ಲು ಶಾಖೆಯು ಯಾವುದೇ ಪ್ರಚಾರದ ಆಡಂಬರವಿಲ್ಲದೆ ನಡೆಸಿಕೊಂಡು ಬರುತ್ತಿರುವ ಈ ಕಾರ್ಯಕ್ರಮವು ಮುಡಿಪು ಪ್ರದೇಶದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ