ಹೂಹಾಕುವಕಲ್ಲು ಶಾಖೆಯು ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಅರ್ಹ ಕುಟುಂಬಗಳಿಗೆ ಅಗತ್ಯ ದಿನಸಿ ಸಾಮಾನುಗಳನ್ನು ಒಳಗೊಂಡ ಸುಮಾರು 53 ರಷ್ಟು ಬಹು ವೆಚ್ಚದ ರಮಳಾನ್ ವಿಶೇಷ ಕಿಟ್ ವಿತರಿಸಲಾಯಿತು.

ಶಾಖೆಯ ಮುಂಭಾಗದಲ್ಲಿ ನಡೆದ ಸರಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು SYS ಬ್ರಾಂಚ್ ಅಧ್ಯಕ್ಷರಾದ ಮೊಹಿದಿನ್ ಕುಂಞಿ ತೋಟಾಲ್ ವಹಿಸಿದ್ದರು. ಬದ್ರಿಯಾ ಜುಮಾ ಮಸ್ಜಿದ್ ಹೂಹಾಕುವಕಲ್ಲು ಖತೀಬರಾದ ಬಹು! ರಫೀಕ್ ಅಹ್ಸನಿ ಕಕ್ಕೆಪದವು ಉಸ್ತಾದರು ಉದ್ಘಾಟಿಸುತ್ತಾ ಶಾಖೆಯ ಸಾಂತ್ವನ ಕಾರ್ಯಕ್ರಮಗಳನ್ನು ಪ್ರಶಂಸಿದರು.
ಕಾರ್ಯಕ್ರಮಕ್ಕೆ ಬಾಳೆಪುಣಿ ಸೆಕ್ಟರ್ ಅಧ್ಯಕ್ಷರಾದ ಸಿದ್ದೀಕ್ ಸಖಾಫಿ ಕಾಯಾರ್, ಪ್ರ.ಕಾರ್ಯದರ್ಶಿ ಝೈನುದ್ದೀನ್ ಇರಾ ಶುಭ ಹಾರೈಸಿದರು. ಶಾಖಾ ಅಧ್ಯಕ್ಷ ಉಸ್ಮಾನ್ ಎನ್ ಸೇರಿದಂತೆ ಹಲವು ಶಾಖಾ ನಾಯಕರು ಉಪಸ್ಥಿತರಿದ್ದರು. ಕಿಟ್ ಗಳನ್ನು ಅರ್ಹರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿತ್ತು.
ಪ್ರತಿ ವರ್ಷವೂ ಹೂಹಾಕುವಕಲ್ಲು ಶಾಖೆಯು ಯಾವುದೇ ಪ್ರಚಾರದ ಆಡಂಬರವಿಲ್ಲದೆ ನಡೆಸಿಕೊಂಡು ಬರುತ್ತಿರುವ ಈ ಕಾರ್ಯಕ್ರಮವು ಮುಡಿಪು ಪ್ರದೇಶದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ