ಪಂಜಾಬ್ (ಮೇ.13) : 1984ರ ದೆಹಲಿ ಸಿಖ್ ಹತ್ಯಾಕಾಂಡದ ಕುರಿತ ಸ್ಯಾಮ್ ಪಿತ್ರೋಡ ಅವರ ಹೇಳಿಕೆ ಖಂಡನಾರ್ಹವಾಗಿದ್ದು ಅವರು ದೇಶದ ಎದುರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಒತ್ತಾಯಿಸಿದ್ದಾರೆ.
ಸೋಮವಾರ ಪಂಜಾಬ್ನ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ದೆಹಲಿ ಸಿಖ್ ಹತ್ಯಾಕಾಂಡದ ಕುರಿತು ಮಾತನಾಡುವಾಗ ಕಾಂಗ್ರೆಸ್ ಹಿರಿಯ ಮುಖಂಡ ಸ್ಯಾಮ್ ಪಿತ್ರೋಡ ‘ಆಗಿದ್ದು ಆಗಿ ಹೋಗಿದೆ’ (ಹುವಾ ತೋ ಹುವಾ) ಎಂದು ಪ್ರತಿಕ್ರಿಯಿಸಿದ್ದಾರೆ. ಆದರೆ, ಇದು ಬೇಜವಾಬ್ದಾರಿಯ ಹಾಗೂ ನಾಚಿಕೆಗೇಡಿನ ಹೇಳಿಕೆ. ಹತ್ಯಾಕಾಂಡಗಳು ಯಾವುದೇ ಕಾಲದಲ್ಲಿ ನಡೆದರೂ ಅದು ಖಂಡನಾರ್ಹ. ಇಂತಹ ಹೇಳಿಕೆ ನೀಡಿದ್ದಕ್ಕೆ ಸ್ಯಾಮ್ ಪಿತ್ರೋಡ ದೇಶದ ಎದುರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
“ಕಾಂಗ್ರೆಸ್ ಪಕ್ಷ ಅವರ ಈ ಹೇಳಿಕೆಯನ್ನು ಖಂಡಿಸುತ್ತದೆ. ಅಲ್ಲದೆ ಈ ಹೇಳಿಕೆಗಾಗಿ ಅವರು ದೇಶದ ಎದುರು ಕ್ಷಮೆ ಕೇಳಬೇಕು ಎಂದು ಸೂಚಿಸಲಾಗಿದೆ. ಪಕ್ಷದ ಎಲ್ಲಾ ನಾಯಕರಿಗೂ ಸೂಕ್ಷ್ಮ ವಿಚಾರಗಳ ಕುರಿತು ಮಾತನಾಡುವಾಗ ನಾಲಗೆಯ ಮೇಲೆ ನಿಗಾ ವಹಿಸುವಂತೆಯೂ ಎಚ್ಚರಿಕೆ ನೀಡಲಾಗಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಟೀಕಿಸಲು ವಿರೋಧಿಸಲು ಸಾಕಷ್ಟು ವಿಷಯಗಳಿವೆ. ಅಂತ ಮುಖ್ಯ ವಿಚಾರಗಳ ಕುರಿತು ಮಾತ್ರ ಮಾತನಾಡುವಂತೆಯೂ ತಿಳಿಸಲಾಗಿದೆ. ಅಲ್ಲದೆ ಸ್ಯಾಮ್ ಪಿತ್ರೋಡ ಅವರ ಹೇಳಿಕೆಗೆ ವ್ಯಯಕ್ತಿಕವಾಗಿ ನಾನೂ ಕ್ಷಮೆಯಾಚಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಕಟುವಾಗಿ ಟೀಕಿಸಿದ್ದರು. ಅಲ್ಲದೆ ಸಿಖ್ ಹತ್ಯಾಕಾಂಡದ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸುವಾಗ “ಆಗಿದ್ದು ಆಗಿ ಹೋಗಿದೆ” ಎಂಬರ್ಥದಲ್ಲಿ ಪ್ರತಿಕ್ರಿಯಿಸಿದ್ದರು. ಸಿಖ್ ಹತ್ಯಾಕಾಂಡದ ಕುರಿತ ಅವರ ಹೇಳಿಕೆ ಇಡೀ ದೇಶದಾದ್ಯಂತ ಭಾರೀ ಟೀಕೆಗೆ ಗುರಿಯಾಗಿತ್ತು. ಅಲ್ಲದೆ ಸ್ವಪಕ್ಷೀಯರಿಂದಲೇ ಟೀಕೆಗೆ ಒಳಗಾಗಿತ್ತು. ಪರಿಣಾಮ ಇಂದು ಪಂಜಾಬ್ನಲ್ಲಿ ಚುನಾವಣಾ ಬಾಷಣ ಮಾಡಿದ ರಾಹುಲ್ ಪ್ರಕರಣವನ್ನು ಉಲ್ಲೇಖಿಸಿ ಕ್ಷಮೆ ಕೇಳಿದ್ದಾರೆ.
ಮೇ.19ರಂದು ನಡೆಯಲಿರುವ 7ನೇ ಹಾಗೂ ಕೊನೆಯ ಹಂತದ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ ರಾಜ್ಯದ ಅಮೃತಸರ, ಜಲಂಧರ್ ಸೇರಿದಂತೆ ಒಟ್ಟು 13 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ