ಮಂಗಳೂರು, ಮೇ 13 – ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗುತ್ತಿರುವಂತೆಯೇ ಕೆಲವು ಪರಿಸರ ಪ್ರೇಮಿಗಳು ಎತ್ತಿನಹೊಳೆ ವಿಚಾರದಲ್ಲಿ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಖಂಡಿಸಿ ನಗರದ ಹಲವೆಡೆ ವ್ಯಂಗ್ಯದಿಂದ ಕೂಡಿರುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ್ದಾರೆ.
ಭಿತ್ತಿಪತ್ರದಲ್ಲಿ ಪ್ರಮುಖವಾಗಿ ಜಿಲ್ಲೆಯ 8 ಶಾಸಕರಿಗೂ ಎಚ್ಚರಿಕೆ ನೀಡಲಾಗಿದೆ. ಕೊಟ್ಟಾರ, ಪಂಪ್ವೆಲ್, ಹಂಪನಕಟ್ಟೆ ಮುಂತಾದೆಡೆ ಈ ಭಿತ್ತಿಪತ್ರಗಳು ಪ್ರದರ್ಶನಗೊಂಡಿವೆ. ಜಿಲ್ಲೆಯ ಎಲ್ಲ ಶಾಸಕರ ಹೆಸರು, ಭಾವಚಿತ್ರ ಹಾಕಿ, ನಿಮ್ಮನ್ನು ಜನ ಚುನಾಯಿಸಿದ್ದು 40 ಲಕ್ಷ ರೂ. ಕಾರಿನಲ್ಲಿ ತಿರುಗಾಡಲು ಅಲ್ಲ, ಜಿಲ್ಲೆಯ ಜನರಿಗೆ ಈಗ ನೀರಿಲ್ಲ, ಮೊದಲು ಎತ್ತಿನಹೊಳೆ ವಿರೋಧಿಸಿ ವಿಧಾನಸಭೆಯಲ್ಲಿ ಧರಣಿ ಮಾಡಿ, ಇಲ್ಲವಾದರೆ ರಾಜಿನಾಮೆ ಕೊಟ್ಟು ಧರಣಿ ಕುಳಿತುಕೊಳ್ಳಿ ಎಂದು ಭಿತ್ತಿಪತ್ರವೊಂದರಲ್ಲಿ ಎಚ್ಚರಿಸಲಾಗಿದೆ.

ಇನ್ನೊಂದು ಬ್ಯಾನರ್ನಲ್ಲಿ ಮುಖಂಡರಾದ ಡಾ. ಎಂ. ವೀರಪ್ಪ ಮೊಯ್ಲಿ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಫೊಟೊ ಹಾಕಿ 13 ಸಾವಿರ ಕೋಟಿ ರೂ. ಯೋಜನೆಯ ಕಮಿಷನ್ ಆಸೆಗಾಗಿ ಜಿಲ್ಲೆಯ ಜೀವ ನದಿಯನ್ನು ಸರ್ವನಾಶ ಮಾಡಿ, ಜನರೀಗ ಶೌಚಾಲಯ, ಚರಂಡಿ ನೀರನ್ನು ಶುದ್ಧೀಕರಿಸಿ ಕುಡಿಯುವಂತೆ ಮಾಡಲಾಗಿದೆ. ಇಂತಹ ಘನಂಧಾರಿ ಕೆಲಸ ಮಾಡಿದ ವೀರಪ್ಪ ಮೊಯ್ಲಿ ಹಾಗೂ ಡಿ.ವಿ ಸದಾನಂದ ಗೌಡರ ಜತೆಗೆ ನಿದ್ದೆಯಲ್ಲಿರುವ ಜಿಲ್ಲೆಯ ಪ್ರಜೆಗಳಿಂದ ಹಾರ್ಧಿಕ ಸ್ವಾಗತ ಎಂದು ವ್ಯಂಗ್ಯವಾಡಲಾಗಿದೆ.
ಅನಧಿಕೃತ ಫ್ಲೆಕ್ಸ್ ತೆರವು ಮಾಡದೆ ಎತ್ತಿನಹೊಳೆ ಕುರಿತು ಅಳವಡಿಸಿರುವ ಭಿತ್ತಿಪತ್ರಗಳನ್ನು ತೆರವುಗೊಳಿಸಿದರೆ ಪರಿಣಾಮ ನೆಟ್ಟಗಿರದು ಎಂದು ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳಿಗೂ ಇದೇ ಭಿತ್ತಿಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್