ರಿಯಾದ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನಲ್ ವತಿಯಿಂದ ನಡೆಯಲಿರುವ “ಬೃಹತ್ ಇಫ್ತಾರ್ ಮುಲಾಖಾತ್ 2019” ರಿಯಾದಿನ ಪ್ರತಿಷ್ಠಿತ ನೂರ್ ಮಾಸ್ ಇಸ್ತಿರಾಹ್ ನಲ್ಲಿ ಮೇ 17 ಶುಕ್ರವಾರ 5:30 ರಿಂದ ರಾತ್ರಿ 9 ಗಂಟೆಯ ತನಕ ನಡೆಯಲಿರುವುದು.
ಸುಮಾರು ಒಂದು ಸಾವಿರದ ಐನೂರು ಮಂದಿ ಪಾಲ್ಗೊಳ್ಳಲು ಅನುಗುಣವಾಗುವಂತೆ ಏರ್ಪಡಿಸಲಾಗುವ ಈ ಕಾರ್ಯಕ್ರಮ ಮಹಿಳೆಯರು ಮಕ್ಕಳು ಸೇರಿದಂತೆ ಅನಿವಾಸಿ ಕನ್ನಡಿಗರ ಸಂಗಮವಾಗಲಿದೆಯೆಂದು ಆಯೋಜಕರು ಪತ್ರಿಕಾಗೋಷ್ಠಿ ಮೂಲಕ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕ ಮಜ್ಲಿಸ್, ರಮದಾನ್ ಸಂದೇಶ ಭಾಷಣ, ಕೆಸಿಎಫ್ ಇಹ್ಸಾನ್ ಚಟುವಟಿಕೆಗಳ ಪ್ರದರ್ಶನ, ” ಗಲ್ಫ್ ಇಶಾರಾ” ಕೌಂಟರ್ ಇತ್ಯಾದಿಗಳನ್ನು ಹಮ್ಮಿಕ್ಕೊಳ್ಳಲಾಗಿದೆ.
ಪತ್ರಕಾಗೋಷ್ಠಿಯಲ್ಲಿ ಇಫ್ತಾರ್ ಮುಲಾಖಾತ್ ನ ಸ್ವಾಗತ ಸಮಿತಿಯ ಅಧ್ಯಕ್ಷ ಉಮರ್ ಅಳಕೆಮಜಲು, ಕಾರ್ಯದರ್ಶಿ ಅನ್ಸಾರ್ ಉಳ್ಳಾಲ, ಫೈನಾನ್ಶಿಯಲ್ ಚೆಯರ್ಮೆನ್ ಹಂಝ ಮೈಂದಾಳ, ಕಾರ್ಯದರ್ಶಿ ಹನೀಫ್ ಕಣ್ಣೂರು, ಕೆ.ಸಿ.ಎಫ್ ಅಂತಾರಾಷ್ಟ್ರೀಯ ಸಮಿತಿ ಸದಸ್ಯ ನಝೀರ್ ಕಾಶಿಪಟ್ಣ, ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಶಿಕ್ಷಣ ಇಲಾಖೆ ಅಧ್ಯಕ್ಷ ಸಿದ್ದೀಕ್ ಸಖಾಫಿ ಪೆರುವಾಯಿ, ಕೆ.ಸಿ.ಎಫ್ ರಿಯಾದ್ ಝೋನಲ್ ಅಧ್ಯಕ್ಷ ಫಾರೂಕ್ ಸಅದಿ, ಪ್ರ.ಕಾರ್ಯದರ್ಶಿ ನಿಝಾಂ ಸಾಗರ, ಇಲ್ಯಾಸ್ ಲತೀಫಿ, ಮುಸ್ತಫಾ ಸ ಅದಿ ಸೂರಿಕುಮೇರು, ಶಮೀರ್ ಜೆಪ್ಪು, ಝೈನ್ ಸಖಾಫಿ ಭಟ್ಕಳ, ಝೈನುಲ್ ಆಬಿದೀನ್ ಮುಈನಿ ಮುಂತಾದದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ