ಬೆಂಗಳೂರು,ಮೇ 22- ಫಲಿತಾಂಶ ಏನೇ ಬಂದರೂ ಸರ್ಕಾರ ಅಸ್ಥಿರಗೊಳಿಸಲು ಅವಕಾಶ ನೀಡಬಾರದೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿಯೇ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು, ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ದೋಸ್ತಿ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿದ್ದಾರೆ.
ನಾಳೆ ಪ್ರಕಟಗೊಳ್ಳಲಿರುವ ಲೋಕಸಭೆ ಚುನಾವಣಾ ಫಲಿತಾಂಶ ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಭವಿಷ್ಯವನ್ನು ನಿರ್ಧರಿಸಲಿದೆ. ಮತಗಟ್ಟೆ ಸಮೀಕ್ಷೆ ಪ್ರಕಾರ ಫಲಿತಾಂಶದಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿದ ಸ್ಥಾನ ಗಳಿಸಿದರೆ ದೋಸ್ತಿ ಸರ್ಕಾರದ ಮೇಲೆ ಪರಿಣಾಮ ಬೀರುವುದರಲ್ಲಿ ಯಾವ ಅನುಮಾನವೂ ಇಲ್ಲ.
ಭಾನುವಾರ ಮತಗಟ್ಟೆ ಸಮೀಕ್ಷೆ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಕೆಲವರು ಸಮೀಕ್ಷೆಯನ್ನು ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ.
ಸಮೀಕ್ಷೆ ಹೊರಬಿದ್ದ ನಂತರ ಉಭಯ ಪಕ್ಷಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಬೆಳಗಾವಿಯ ರಮೇಶ್ ಜಾರಕಿಹೊಳಿ ಕಾಂಗ್ರೆಸ್ಗೆ ಗುಡ್ಬೈ ಹೇಳಲು ತೀರ್ಮಾನಿಸಿದ್ದರೆ, ಇನ್ನು ನಿನ್ನೆಯಷ್ಟೇ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮುಖಂಡ ರೋಷನ್ ಬೇಗ್ ಸಿಡಿಸಿರುವ ಬಾಂಬ್ ಕಾಂಗ್ರೆಸ್ ಪಕ್ಷವನ್ನೇ ಅಲುಗಾಡಿಸತೊಡಗಿದೆ.ಫಲಿತಾಂಶ ಪ್ರಕಟಗೊಂಡ ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಉಂಟಾಗಿ ಸರ್ಕಾರ ರಚನೆಗೆ ಅವಕಾಶ ಸಿಗುತ್ತದೆ ಎಂಬ ಅಪರಿಮಿತ ನಿರೀಕ್ಷೆಯಲ್ಲಿದ್ದಾರೆ ಬಿಜೆಪಿ ನಾಯಕರು.
ರಮೇಶ್ ಜಾರಕಿಹೊಳಿ, ರೋಷನ್ ಬೇಗ್ ಸೇರಿದಂತೆ ಕೆಲವು ಕಾಂಗ್ರೆಸ್ನ ಭಿನ್ನಮತೀಯ ಶಾಸಕರು ಸರ್ಕಾರದಿಂದ ಹೊರಬರುವುದಲ್ಲದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವಿಶ್ವಾಸವನ್ನಿಟ್ಟುಕೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ