ಲಕ್ನೋ, ಮೇ 24: ಲೋಕಸಭಾ ಚುನಾವಣೆಯಲ್ಲಿ ಬಹುಜನ್ ಸಮಾಜ ಪಕ್ಷದ ಹೀನಾಯ ಸೋಲಿಗೆ ಪಕ್ಷದ ಮುಖ್ಯಸ್ಥೆ ಮಾಯಾವತಿ ಇವಿಎಂಗಳನ್ನು ದೂರಿದ್ದಾರೆ. ‘‘ಇವಿಎಂಗಳ ಸಹಾಯದಿಂದ ಚುನಾವಣೆಯನ್ನು ಹೈಜಾಕ್ ಮಾಡಲಾಗಿದೆ’’ ಎಂದು ಅವರು ಬಿಜೆಪಿ ವಿರುದ್ಧ ಆರೋಪ ಹೊರಿಸಿದ್ದಾರೆ.
ಸಮಾಜವಾದಿ ಪಕ್ಷದೊಂದಿಗೆ ಮಹಾಮೈತ್ರಿ ಸಾಧಿಸಿದ್ದ ಮಾಯಾವತಿ ತಮ್ಮ ಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವುದೆಂಬ ಆತ್ಮವಿಶ್ವಾಸ ಹೊಂದಿದ್ದರೂ ಹಾಗಾಗಿಲ್ಲ.
‘‘ಇಡೀ ದೇಶವೇ ಇವಿಎಂಗಳನ್ನು ವಿರೋಧಿಸುತ್ತಿದೆ. ಇಂದಿನ ಫಲಿತಾಂಶದ ನಂತರ ಉಳಿದ ವಿಶ್ವಾಸವೂ ನಶಿಸುವುದು’’ ಎಂದು ಮಾಯಾವತಿ ಹೇಳಿದರು.
2017 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರವೂ ಮಾಯಾವತಿ ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದರು. ‘‘ದೇಶದ ವಿಶ್ವಾಸ ಮುರಿದು ಬಿದ್ದಿದೆ. ಚುನಾವಣಾ ಆಯೋಗ ಮತ್ತು ಬಿಜೆಪಿ ಕುರಿತಂತೆ ಏನೋ ಸಂಶಯಾಸ್ಪದ ವಿಚಾರವಿದೆ. ಇಬ್ಬರೂ ಮತ ಪತ್ರಗಳಿಗೆ ಒಪ್ಪುತ್ತಿಲ್ಲ’’ ಎಂದು ಮಾಯಾವತಿ ಹೇಳಿದರು.
ಇಂತಹ ಕಳಪೆ ನಿರ್ವಹಣೆ ನಿರೀಕ್ಷಿಸಿರಲಿಲ್ಲ ಎಂದ ಮಾಯಾವತಿ, ಜನರ ಭಾವನೆಗಳಿಗೆ ವಿರುದ್ಧವಾಗಿ ಈ ಫಲಿತಾಂಶ ಮೂಡಿ ಬಂದಿದೆ ಎಂದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ