ಮಂಗಳೂರು: ಉದ್ಯೋಗ ಅರಸಿ ಏಜೆನ್ಸಿಯೊಂದರ ಮೂಲಕ ಕುವೈತ್ಗೆ ತೆರಳಿ, ಅಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಮಂಗಳೂರಿನ 35 ಯುವಕರ ಗುಂಪು ಸಹಾಯಕ್ಕಾಗಿ ಮೊರೆ ಇಡುತ್ತಿರುವ ವಿಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಜನವರಿ ತಿಂಗಳಿನಲ್ಲಿ ಕುವೈತ್ಗೆ ತೆರಳಿದ್ದು, ಐದು ತಿಂಗಳಿನಿಂದ ಸಂಬಳ ನೀಡಿಲ್ಲ. ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ ಎಂದು ವಿಡಿಯೊದಲ್ಲಿ ಯುವಕರು ಅಳಲು ತೋಡಿಕೊಂಡಿದ್ದಾರೆ. ತಮ್ಮಂತೆಯೇ ವಿವಿಧ ರಾಜ್ಯಗಳಿಂದ ಬಂದಿರುವ 200 ಕಾರ್ಮಿಕರು ಸಂಕಷ್ಟದಲ್ಲಿರುವುದಾಗಿ ತಿಳಿಸಿದ್ದಾರೆ.
‘ಮಂಗಳೂರಿನ ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮಾಲೀಕ ಪ್ರಸಾದ್ ಶೆಟ್ಟಿ ಎಂಬವರಿಗೆ 65,000 ನೀಡಿ ಜನವರಿ 7ರಂದು ಕುವೈತ್ಗೆ ಬಂದಿದ್ದೇವೆ. ಇಲ್ಲಿ ಬಂದ ಬಳಿಕ ಅತಂತ್ರರಾಗಿದ್ದೇವೆ. ಐದು ತಿಂಗಳಿನಿಂದ ಸಂಬಳ ನೀಡಿಲ್ಲ. ಕೆಲಸದ ಸ್ಥಳದಲ್ಲಿ ಊಟದ ವ್ಯವಸ್ಥೆಯನ್ನೂ ರದ್ದುಗೊಳಿಸಿದ್ದಾರೆ. ಊಟಕ್ಕಾಗಿ ನಾವು ಬೇಡುವ ಪರಿಸ್ಥಿತಿ ಬಂದಿದೆ’ ಎಂದು ಗಣೇಶ್ ಎಂಬುವವರು ಹೇಳಿರುವುದು ವಿಡಿಯೊದಲ್ಲಿದೆ.
‘ಕುವೈತ್ನ ಕೇಂಬ್ರಿಡ್ಜ್ ಎಂಬ ಕಂಪೆನಿಯಲ್ಲಿ ಉದ್ಯೋಗ ನೀಡುವುದಾಗಿ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆದರೆ, ಬೇರೆ ಕಂಪೆನಿಯಲ್ಲಿ ಕೆಲಸ ನೀಡಿದರು. ಊರಿಗೆ ಮರಳಿದರೆ ಸಾಕು ಎಂಬ ಸ್ಥಿತಿಯಲ್ಲಿದ್ದೇವೆ’ ಎಂದು ಇನ್ನೊಬ್ಬ ಯುವಕ ಹೇಳಿದ್ದಾರೆ.
‘ಸಹಾಯ ಕೇಳಿ ಕುವೈತ್ನ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಸಂಪರ್ಕ ಮಾಡಿದೆವು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಈ ವಿಡಿಯೊವನ್ನು ಶಾಸಕ ವೇದವ್ಯಾಸ ಕಾಮತ್ ಅವರಿಗೆ ತಲುಪಿಸಿ. ನಮ್ಮ ನೆರವಿಗೆ ಬನ್ನಿ ಎಂದು ಅವರಲ್ಲಿ ಮನವಿ ಮಾಡುತ್ತೇವೆ. ಮಾಧ್ಯಮದವರು, ರಾಜಕಾರಣಿಗಳು ಮತ್ತು ಶಾಸಕರು ನಮ್ಮ ನೆರವಿಗೆ ಬನ್ನಿ. ದಯವಿಟ್ಟು ನಾವು ವಾಪಸು ಊರಿಗೆ ಬರಲು ನೆರವು ನೀಡಿ’ ಎಂದು ಇವರೆಲ್ಲರೂ ಬೇಡಿಕೊಂಡಿದ್ದಾರೆ.
ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳ 200ಕ್ಕೂ ಹೆಚ್ಚು ಮಂದಿ ಕೆಲಸಕ್ಕಾಗಿ ಬಂದು ಅಲ್ಲಿ ಸಂಕಷ್ಟದಲ್ಲಿದ್ದಾರೆ ಎಂದು ಈ ಯುವಕರು ವಿಡಿಯೊದಲ್ಲಿ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು