ಕೌಲಾಲಂಪುರ್,ಮೇ.27: ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಉಸ್ತಾದರು ಮಲೇಷ್ಯಾ ಪ್ರಧಾನ ಮಂತ್ರಿ ಡಾ.ಮಹಾತಿರ್ ಬಿನ್ ಮುಹಮ್ಮದ್’ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇಂದು ಬೆಳಿಗ್ಗೆ ಕೌಲಾಲಂಪುರದಲ್ಲಿರುವ ಪ್ರಧಾನಮಂತ್ರಿಯವರ ಕಚೇರಿಗೆ ತಲುಪಿದ ಭಾರತದ ಗ್ರ್ಯಾಂಡ್ ಮುಫ್ತಿಯವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಭೇಟಿಯಲ್ಲಿ ಮಲೇಷ್ಯಾ ಪ್ರಧಾನ ಮಂತ್ರಿಯವರಿಗೆ ಭಾರತದ ಮುಸ್ಲಿಮರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಗ್ರ್ಯಾಂಡ್ ಮುಫ್ತಿ ಹೇಳಿದರು.

ಡಾ.ಮಹಾತಿರ್ ಬಿನ್ ಮುಹಮ್ಮದ್’ರವರ ದಶಕಗಳ ಸವಿಶೇಷ ದೂರದೃಷ್ಟಿ ಹಾಗೂ ಜನ ಸಮೂಹದೊಂದಿಗಿರುವ ಪರಸ್ಪರ ಉತ್ತಮ ಬಾಂಧವ್ಯವು ಮಲೇಷಿಯಾವನ್ನು ಉನ್ನತಿಗೇರಿಸಿದೆ ಎಂದು ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಮರ್ಕಝ್ ನ ನಿರ್ದೇಶಕರಾದ ಎ.ಪಿ. ಅಬ್ದುಲ್ ಹಕೀಮ್ ಅಝ್ಹರಿ ಜೊತೆಗಿದ್ದರು.ಭಾರತದಲ್ಲಿ ಜಾಮಿಯಾ ಮರ್ಕಝ್ ನಡೆಸುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಕುರಿತು ವಿಸ್ತೃತ ಮಾಹಿತಿಯನ್ನು ಪಡೆದ ಪ್ರಧಾನಿ, ಮಲೇಷಿಯಾದ ವಿಭಿನ್ನ ವಿಶ್ವವಿದ್ಯಾನಿಲಯಗಳೊಂದಿಗೆ ಸಹಕರಿಸಿ ದ್ವಿರಾಷ್ಟ್ರಗಳ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಪ್ರಯತ್ನಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಮೂಲ : ಸಿರಾಜ್ ಡೈಲಿ
ಕನ್ನಡಕ್ಕೆ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ