ಕುವೈತ್: ಹೃದಯಾಘಾತಕ್ಕೀಡಾಗಿ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ವಿದೇಶೀಯರಿಗೆ ಇನ್ನು ಮುಂದೆ ಕುವೈತ್ನಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಆರೋಗ್ಯ ಸಚಿವ ಶೈಖ್ ಬಾಸಿಲ್ ಅಸ್ಸ್ವಬಾಹ್ ಈ ಬಗ್ಗೆ ಮೆಡಿಕಲ್ ಬಾಬ್ತಿನಿಂದ ಮುಕ್ತಗೊಳಿಸಿ ಆದೇಶ ನೀಡಿದ್ದಾರೆ.
ಮಾನವೀಯ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅರೋಗ್ಯ ಸಚಿವಾಲಯ ವ್ಯಕ್ತಪಡಿಸಿದೆ.ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ತಲುಪುವ ರೋಗಿಗೆ ಚಿಕಿತ್ಸೆ ನೀಡುವ ಡಾಕ್ಟರ್ ಮತ್ತು ಆಸ್ಪತ್ರೆಯ ಅಧಿಕಾರಿಯ ವರದಿಯ ಆಧಾರಲ್ಲಿ ಈ ಪ್ರಯೋಜನ ಲಭಿಸಲಿದೆ. ಎಲ್ಲಾ ವಿಭಾಗದ ವಿದೇಶೀಯರಿಗೂ ಈ ಪ್ರಯೋಜನ ಲಭ್ಯವಾಗಲಿದ್ದು, ಮನೆಕೆಲಸ ಸಹಿತ ಹತ್ತು ವಿಭಾಗದಲ್ಲಿ ಕೆಲಸ ನಿರ್ವಹಿಸುವ ವಿದೇಶೀಯರಿಗೆ ಈ ಹಿಂದೆಯೇ ಉಚಿತ ಚಿಕಿತ್ಸೆಯ ಪ್ರಯೋಜನ ಲಭಿಸುತ್ತಿತ್ತು.
ಆರೋಗ್ಯ ಇಲಾಖೆಯ ಸಿಬ್ಬಂದಿ, ಹನ್ನೆರಡರ ಒಳಗಿನ ಪ್ರಾಯದವರಾದ ಕ್ಯಾನ್ಸರ್ ಪೀಡಿತ ಮಕ್ಕಳು, ಅಭಯ ಕೇಂದ್ರದ ನಿವಾಸಿಗಳು, ಜಿಸಿಸಿ ರಾಷ್ಟ್ರದ ಪೌರರು, ಬಿದೂನಿಗಳು, ದೇಶಕ್ಕೆ ಬಂದಿರುವ ಅಧಿಕೃತ ಸಂಘದ ಪ್ರತಿನಿಧಿಗಳು, ಟ್ರಾನ್ಸಿಟ್ ಯಾತ್ರಿಕರು, ಜೈಲುಗಳಲ್ಲಿರುವ ವಿದೇಶೀ ಖೈದಿಗಳು, ವಿದ್ಯಾಭ್ಯಾಸ ಸಚಿವಾಲಯದ ಪ್ರಾಯೋಜತ್ವದಲ್ಲಿ ಕಲಿಯುತ್ತಿರುವ ವಿದೇಶೀ ವಿದ್ಯಾರ್ಥಿಗಳು ಮುಂತಾದವರಿಗೆ ಸರಕಾರಿ ಆಸ್ಪತ್ರೆಯ ಉಚಿತ ಚಿಕಿತ್ಸೆ ದೊರೆಯಲಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ