ಕುವೈತ್: ಹೃದಯಾಘಾತಕ್ಕೀಡಾಗಿ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ವಿದೇಶೀಯರಿಗೆ ಇನ್ನು ಮುಂದೆ ಕುವೈತ್ನಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಆರೋಗ್ಯ ಸಚಿವ ಶೈಖ್ ಬಾಸಿಲ್ ಅಸ್ಸ್ವಬಾಹ್ ಈ ಬಗ್ಗೆ ಮೆಡಿಕಲ್ ಬಾಬ್ತಿನಿಂದ ಮುಕ್ತಗೊಳಿಸಿ ಆದೇಶ ನೀಡಿದ್ದಾರೆ.
ಮಾನವೀಯ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅರೋಗ್ಯ ಸಚಿವಾಲಯ ವ್ಯಕ್ತಪಡಿಸಿದೆ.ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ತಲುಪುವ ರೋಗಿಗೆ ಚಿಕಿತ್ಸೆ ನೀಡುವ ಡಾಕ್ಟರ್ ಮತ್ತು ಆಸ್ಪತ್ರೆಯ ಅಧಿಕಾರಿಯ ವರದಿಯ ಆಧಾರಲ್ಲಿ ಈ ಪ್ರಯೋಜನ ಲಭಿಸಲಿದೆ. ಎಲ್ಲಾ ವಿಭಾಗದ ವಿದೇಶೀಯರಿಗೂ ಈ ಪ್ರಯೋಜನ ಲಭ್ಯವಾಗಲಿದ್ದು, ಮನೆಕೆಲಸ ಸಹಿತ ಹತ್ತು ವಿಭಾಗದಲ್ಲಿ ಕೆಲಸ ನಿರ್ವಹಿಸುವ ವಿದೇಶೀಯರಿಗೆ ಈ ಹಿಂದೆಯೇ ಉಚಿತ ಚಿಕಿತ್ಸೆಯ ಪ್ರಯೋಜನ ಲಭಿಸುತ್ತಿತ್ತು.
ಆರೋಗ್ಯ ಇಲಾಖೆಯ ಸಿಬ್ಬಂದಿ, ಹನ್ನೆರಡರ ಒಳಗಿನ ಪ್ರಾಯದವರಾದ ಕ್ಯಾನ್ಸರ್ ಪೀಡಿತ ಮಕ್ಕಳು, ಅಭಯ ಕೇಂದ್ರದ ನಿವಾಸಿಗಳು, ಜಿಸಿಸಿ ರಾಷ್ಟ್ರದ ಪೌರರು, ಬಿದೂನಿಗಳು, ದೇಶಕ್ಕೆ ಬಂದಿರುವ ಅಧಿಕೃತ ಸಂಘದ ಪ್ರತಿನಿಧಿಗಳು, ಟ್ರಾನ್ಸಿಟ್ ಯಾತ್ರಿಕರು, ಜೈಲುಗಳಲ್ಲಿರುವ ವಿದೇಶೀ ಖೈದಿಗಳು, ವಿದ್ಯಾಭ್ಯಾಸ ಸಚಿವಾಲಯದ ಪ್ರಾಯೋಜತ್ವದಲ್ಲಿ ಕಲಿಯುತ್ತಿರುವ ವಿದೇಶೀ ವಿದ್ಯಾರ್ಥಿಗಳು ಮುಂತಾದವರಿಗೆ ಸರಕಾರಿ ಆಸ್ಪತ್ರೆಯ ಉಚಿತ ಚಿಕಿತ್ಸೆ ದೊರೆಯಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ