ಬೆಂಗಳೂರು: ರಾಜ್ಯದಲ್ಲಿ 2019-20ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಪ್ರಕಟವಾಗಿದ್ದು, ಅದರಂತೆ ಬೆಸ್ಕಾಂ, ಮೆಸ್ಕಾಂ, ಸೆಸ್ಕಾಂ, ಹೆಸ್ಕಾಂ, ಜೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರ 33 ಪೈಸೆ ಏರಿಕೆ ಮಾಡಲಾಗಿದೆ. ಏಪ್ರಿಲ್ 1 ರಿಂದ ಪೂರ್ವಾನ್ವಯವಾಗುವಂತೆ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭುದಯಾಳ್ ಮೀನಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಸ್ಕಾಂ ಪ್ರತಿ ಯೂನಿಟ್ಗೆ 1.01 ರೂ. ಏರಿಕೆ ಮಾಡುವಂತೆ ಕೆಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೆಇಆರ್ಸಿ ಯೂನಿಟ್ಗೆ 33 ಪೈಸೆ ಏರಿಕೆ ಮಾಡಲು ಒಪ್ಪಿಗೆ ನೀಡಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದು ಯೂನಿಟ್ ವಿದ್ಯುತ್ಗೆ 1.38, ಸೆಸ್ಕಾಂ ಯೂನಿಟ್ ಗೆ ಸರಾಸರಿ 1 ರೂ., ಹೆಸ್ಕಾಂ 1.63 ರೂ. ಗೆ, ಹಾಗೂ ಜೆಸ್ಕಾಂ 1.27 ಪೈಸೆ ಏರಿಕೆ ಮಾಡುವಂತೆ ಕೆಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಎಲ್ಲ ಐದು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಪ್ರತಿ ಯೂನಿಟ್ಗೆ ಸರಾಸರಿ ವಿದ್ಯುತ್ ದರವನ್ನು 33 ಪೈಸೆಗೆ ಏರಿಕೆಗೆ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.
ಎಲ್ಲಾ 5 ಎಸ್ಕಾಂಗಳಿಂದ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಎಸ್ಕಾಂಗಳು ಯೋಜಿತ ಆದಾಯದಲ್ಲಿ 7,217 ಕೋಟಿ ರೂ. ಕೊರತೆ ಬರುತ್ತದೆ ಎಂದು ಪ್ರಸ್ತಾಪಿಸಿತ್ತು. ಹಾಗಾಗಿ 1 ರೂ. ನಿಂದ 1.67 ರೂ. ಏರಿಕೆಗೆ ಕೋರಲಾಗಿತ್ತು. ವಿಚಾರಣೆ ನಡೆಸಿ ಸರಾಸರಿ ಯೂನಿಟ್ ಗೆ 33 ಪೈಸೆ ಏರಿಕೆಗೆ ಒಪ್ಪಿಗೆ ಕೊಡಲಾಗಿದೆ ಎಂದು ಹೇಳಿದರು.
ಎಲೆಕ್ಟ್ರಿಕ್ ಮೋಟಾರು ವಾಹನ ದರ ಯೂನಿಟ್ಗೆ 5 ರೂ. ನಿಗದಿ ಮಾಡಲಾಗಿದೆ. ಐಪಿ ಪಂಪ್ ಸೆಟ್ ರಾಜ್ಯದಲ್ಲಿ 10 ಎಚ್ಪಿಗಿಂತ ಕಡಿಮೆ ಸಾಮರ್ಥ್ಯದ 28 ಲಕ್ಷ ಪಂಪ್ ಸೆಟ್ ಗಳಿವೆ. ರಾಜ್ಯ ಸರ್ಕಾರ 2019-20 ನೇ ಸಾಲಿನ ಬಜೆಟ್ನಲ್ಲಿ 11,250 ಕೋಟಿ ರೂ. ಎಸ್ಕಾಂಗಳಿಗೆ ಸಬ್ಸಿಡಿ ಪಾವತಿಗೆ ಹಣ ತೆಗೆದಿರಿಸಿದೆ. ಆದರೆ ಎಸ್ಕಾಂಗಳಿಗೆ ಒಟ್ಟು 11,780 ಕೋಟಿ ರೂ. ಸಬ್ಸಿಡಿ ಪಾವತಿಸಬೇಕಿದೆ. ಹೀಗಾಗಿ ಕೊರತೆ ಕಂಡು ಬಂದಿದೆ. ಕೆಪಿಟಿಸಿಎಲ್ ಪ್ರಸರಣ ನಷ್ಠ ಶೇ.3.16 ನಷ್ಟಿದೆ. ಸರಬರಾಜು ನಷ್ಠ ಶೇ.12.5 ರಷ್ಟಿದೆ. ನಮ್ಮ ಮೆಟ್ರೋಗೆ ಪ್ರತಿ ಯೂನಿಟ್ ವಿದ್ಯುತ್ ದರ 5.20 ರಿಯಾಯಿತಿ ದರ ನಿಗದಿಪಡಿಸಲಾಗಿದೆ. ಉಷ್ಣವಿದ್ಯುತ್ ಸ್ಥಾವರದಿಂದ ವಿದ್ಯುತ್ ಖರೀದಿ ದರ ಏರಿಕೆ, ಉತ್ಪಾದನಾ ವೆಚ್ಚ ಏರಿಕೆ, ಸಿಬ್ಬಂದಿ ವೇತನ ಏರಿಕೆ ಮತ್ತಿತರ ಕಾರಣಗಳಿಂದ ವಿದ್ಯುತ್ ದರ ಏರಿಕೆ ಮಾಡಲು ಕಾರಣ ಎಂದು ಶಂಭುದಯಾಳ್ ಮೀನಾ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ