ದುಬೈ: ಈದ್ ರಜೆಯ ಪ್ರಯುಕ್ತ ಈ ವಾರಾಂತ್ಯದಲ್ಲಿ ವಿಮಾನ ನಿಲ್ದಾಣದಲ್ಲಿ ಜನಸಂದಣಿ ಉಂಟಾಗಲಿದೆ ಎಂದು ಎಮಿರೇಟ್ಸ್ ತಿಳಿಸಿದೆ. ಶುಕ್ರವಾರ 80,000 ಮಂದಿ ಮೂರನೇ ಟರ್ಮಿನಲ್ ಮೂಲಕ ಯಾತ್ರೆ ಹೊರಟಿದ್ದಾರೆ. ಜನಸಂದಣಿ ಉಂಟಾಗಲಿರುವುದನ್ನು ಮನಗಂಡು ಯಾತ್ರಿಕರು ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಎಮಿರೇಟ್ಸ್ ಮತ್ತು ಏರ್ ಇಂಡಿಯಾ ವ್ಯಕ್ತಪಡಿಸಿದೆ.
ಜೂನ್ 3 ಸೋಮವಾರದ ವರೆಗೆ ಜನಸಂದಣಿ ಮುಂದುವರಿಯಲಿದ್ದು, ಈ ದಿನಗಳಲ್ಲಿ ದುಬೈ ವಿಮಾನ ನಿಲ್ದಾಣದ ಮೂಲಕ 3,09,000 ಪ್ರಯಾಣಿಕರು ಯಾತ್ರೆ ಕೈಗೊಳ್ಳಲಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಲವು ರಸ್ತೆಗಳ ಕಾಮಗಾರಿ ಕೂಡ ನಡೆಯುತ್ತಿದೆ. ಆದ್ದರಿಂದ ಮೂರು ಗಂಟೆ ಮುಂಚಿತವಾಗಿ ಯಾತ್ರಿಕರು ವಿಮಾನ ನಿಲ್ದಾಣಕ್ಕೆ ತಲುಪಬೇಕಿದೆ.
ಆರು ಗಂಟೆ ಮುಂಚಿತವಾಗಿ ಯಾತ್ರಿಕರಿಗೆ ತಮ್ಮ ಲಗ್ಗೇಜ್ಗಳನ್ನು ಚೆಕ್ ಇನ್ ಮಾಡಬಹುದಾಗಿದೆ. ಕುಟುಂಬಗಳಿಗಾಗಿ ಮೂರನೇ ಟರ್ಮಿನಲ್ ನಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. ವಿಮಾನ ಹೊತಡುವುದಕ್ಕಿಂತ ಒಂದು ತಾಸು ಮುಂಚಿತವಾಗಿಯಾದರೂ ರಿಪೋರ್ಟ್ ಮಾಡದವರನ್ನು ಯಾತ್ರೆ ಹೊರಡುವುದಕ್ಕೆ ಸಮ್ಮತಿಸಲಾಗದು ಎಂದು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಸಮಯವನ್ನು ಲಾಭಿಸುವುದಕ್ಕಾಗಿ ಯಾತ್ರಿಕರು ಆನ್ ಲೈನ್ ಮೂಲಕವೂ ಚೆಕ್ ಇನ್ ಮಾಡಬಹುದಾಗಿದೆ. ಹೊರಡುವುದಕ್ಕೆ ನಲವತ್ತೈದು ನಿಮಿಷಗಳ ಮುಂಚಿತವಾಗಿ ಬೋರ್ಡಿಂಗ್ ಪ್ರಾರಂಭಗೊಳ್ಳಲಿದ್ದು, ಇಪ್ಪತ್ತು ನಿಮಿಷಗಳ ಮುಂಚೆ ಗೇಟ್ಗಳನ್ನು ಬಂದ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ