ಹೈದರಾಬಾದ್: ಬಿಜೆಪಿ ಅಧಿಕಾರಕ್ಕೆ ಬಂದದ್ದಕ್ಕಾಗಿ ದೇಶದಲ್ಲಿರುವ ಮುಸ್ಲಿಮರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಎಐಎಂಐಎಂ ನಾಯಕ ಅಸದುದ್ದೀನ್ ಉವೈಸಿ ಹೇಳಿದರು.ಇಲ್ಲಿನ ಮಕ್ಕಾ ಮಸೀದಿಯಲ್ಲಿ ಮೇ.31ರಂದು ನಡೆದ ಜುಮುಅತುಲ್ ವಿದಾದಲ್ಲಿ (ರಮಝಾನಿನ ಕೊನೆಯ ಶುಕ್ರವಾರ) ಅವರು ಮಾತನಾಡುತ್ತಿದ್ದರು.
ಮೋದಿ ದೇವಸ್ಥಾನಕ್ಕೆ ಹೋಗಬಹುದಾದರೆ ನಾವು ಮಸೀದಿಗೆ ಹೋಗಬಹುದು. ಮೋದಿಗೆ ಗುಹೆಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುವುದಾದರೆ ನಮ್ಮ ಮಸೀದಿಯಲ್ಲಿ ನಮಗೂ ಕುಳಿತುಕೊಳ್ಳಬಹುದು ಎಂದು ತುಂಬು ಅಭಿಮಾನದಿಂದ ಹೇಳುತ್ತೇನೆ.
ಬಿಜೆಪಿ 300ಕ್ಕೂ ಹೆಚ್ಚು ಸಂಸದ ಸ್ಥಾನ ಗಳಿಸಿದ್ದೇನೂ ದೊಡ್ಡ ವಿಷಯವಲ್ಲ. ಭಾರತಕ್ಕೆ ಒಂದು ಸಂವಿಧಾನ ಇದೆ. ಬಿಜೆಪಿ 300 ಸೀಟು ಪಡೆದ ಕೂಡಲೇ ನಮ್ಮ ಹಕ್ಕುಗಳನ್ನು ಕಿತ್ತೆಸೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯದ ಭರವಸೆಯನ್ನು ಸಂವಿಧಾನ ಕೊಡುತ್ತಿದೆ. ಮುಸ್ಲಿಮರನ್ನು ಪ್ರಜೆಗಳಂತೆ ಪರಿಗಣಿಸಬೇಕು. ವಲಸೆ ಬಂದವರಂತೆ ಅವರಲ್ಲಿ ವರ್ತಿಸಬಾರದು ಎಂದು ಅಸದುದ್ದೀನ್ ಉವೈಸಿ ಹೇಳಿದರು. ಐಎಎಂಐಎಂ ಮುಖ್ಯ ನಾಯಕರಾಗಿರುವ ಅವರು ನಾಲ್ಕನೆ ಬಾರಿಗೆ ಹೈದರಾಬಾದಿನಿಂದ ಸಂಸತ್ತಿಗೆ ಆಯ್ಕೆಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
15,000 ಜನರನ್ನು ಕೊಲ್ಲುವ ಗುರಿ: ಮುಹರಂ ಕಾರ್ಯಕ್ರಮದಲ್ಲಿ ವಿಷಪೂರಿತ ಮಾತ್ರೆಗಳನ್ನು ವಿತರಿಸಿದ ವ್ಯಕ್ತಿ ಬಂಧನ
‘ತೂಫಾನ್’ ಗೆ ಮರ್ಕಝ್ ಸಾಥ್ : ಕಾಂತಪುರಂ ಉಸ್ತಾದ್- ಗೃಹ ಸಚಿವ ರಮೇಶ್ ಚೆನ್ನಿತ್ತಲ ಸಮಾಲೋಚನೆ
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ