ನವದೆಹಲಿ: ತವರು ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ರಜಾ ಕಾಲದ ಪೀಠ ಅನುಮತಿ ನೀಡಿದೆ. ಪಾಶ್ವವಾಯುನಿಂದ ಬಳಲುತ್ತಿರುವ ಮಾವನನ್ನು ನೋಡಲು ರೆಡ್ಡಿಗೆ ನ್ಯಾಯಾಲಯ ಅನುಮತಿ ನೀಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜಾಮೀನು ಮೇಲೆ ಹೊರಗಿರುವ ಜನಾರ್ದನ ರೆಡ್ಡಿ ಅವರು ಬಳ್ಳಾರಿಗೆ ತೆರಳದಂತೆ ವಿಧಿಸಲಾಗಿದ್ದ ಷರತ್ತನ್ನು ಸುಪ್ರೀಂಕೋರ್ಟ್ ಎರಡು ವಾರಗಳ ಕಾಲ ಸಡಿಲಿಸಿದೆ.
ಜನಾರ್ದನ ರೆಡ್ಡಿ ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಜಾಕಾಲದ ಪೀಠ, ಜೂನ್ 8ರಿಂದ ಎರಡು ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ ನೀಡಿದೆ. ಜೊತೆಗೆ ಜನಾರ್ದನ ರೆಡ್ಡಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸದ ಸಿಬಿಐ ಯನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆತುಕೊಂಡಿತು.
ಗಣಿ ಕೇಸ್ನಲ್ಲಿ ಜೈಲುಪಾಲಾಗಿ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ರೆಡ್ಡಿ ಬಳ್ಳಾರಿಗೆ ಮರಳಲಿದ್ದಾರೆ.
ಇನ್ನಷ್ಟು ಸುದ್ದಿಗಳು
ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ ಪ್ರಮಾಣ ವಚನ ಸ್ವೀಕಾರ
ಭಾರತೀಯ ಮಣ್ಣಲ್ಲಿ ಹಳ್ಳಿ ನಿರ್ಮಿಸಿದ ಚೀನಾ- ಪ್ರಧಾನಿ ಮೌನವೇಕೆ?
ಟ್ರಂಪ್ ವಿದಾಯ ಭಾಷಣ- ಹೊಸ ಸರ್ಕಾರಕ್ಕೆ ಶುಭ ಹಾರೈಕೆ
ಗೋರಕ್ಷಕರ ಮೇಲಿನ ಎಲ್ಲಾ ಪ್ರಕರಣಗಳು ವಾಪಸ್- ಪಶು ಸಂಗೋಪನೆ ಸಚಿವ
ಉಮ್ರಾ ಯಾತ್ರಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ- ಸೌದಿ ಹಜ್, ಉಮ್ರಾ ಸಚಿವ
ಸುರತ್ಕಲ್: ಸೋಶಿಯಲ್ ಮೀಡಿಯಾ ಮೂಲಕ ಹನಿಟ್ರ್ಯಾಪ್- ನಾಲ್ವರ ಬಂಧನ