ದುಬೈ, ಜೂ.8: ಒಮಾನ್ ನಿಂದ ದುಬೈಗೆ ಆಗಮಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಮೃತಪಟ್ಟ 12 ಭಾರತೀಯರನ್ನು ಭಾರತದಲ್ಲಿ ಅವರ ಕುಟುಂಬಕ್ಕೆ ಹಸ್ತಾಂತರಿಸುವ ಮುನ್ನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಕಾರ್ಯದಲ್ಲಿ ದುಬೈಯಲ್ಲಿರುವ ಭಾರತೀಯ ದೂತಾವಾಸ ಕಚೇರಿ ನಿರತವಾಗಿದೆ.
ಒಮಾನ್ ರಾಜಧಾನಿ ಮಸ್ಕತ್ ನಿಂದ ದುಬೈಗೆ ಈದುಲ್ ಫಿತ್ವ್ ರ್ ರಜೆಯಲ್ಲಿ ಹಬ್ಬ ಮುಗಿಸಿಕೊಂಡು ಪ್ರಯಾಣಿಕರು ವಾಪಸ್ಸಾಗುತ್ತಿದ್ದ ವೇಳೆ ಬಸ್ ರಾಶಿದಿಯಾ ಮೆಟ್ರೊ ನಿಲ್ದಾಣದ ಹತ್ತಿರ ರಸ್ತೆಯೊಂದನ್ನು ತಪ್ಪಾಗಿ ಪ್ರವೇಶಿಸಿದ ಸಂದರ್ಭದಲ್ಲಿ ಕಳೆದ ಗುರುವಾರ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದುಬೈಯ ವಿಧಿವಿಜ್ಞಾನ ಪ್ರಯೋಗಾಲಯ 11 ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದ್ದು ಇನ್ನೊಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಅಧಿಕಾರಿಗಳಿಂದ ಇನ್ನೂ ಸಿಗಬೇಕಿದೆ ಎಂದು ದುಬೈಯಲ್ಲಿರುವ ಭಾರತೀಯ ಕೌನ್ಸಲ್ ಜನರಲ್ ವಿಪುಲ್ ಟ್ವೀಟ್ ಮಾಡಿದ್ದಾರೆ.
ಈ ವಿಧಿವಿಜ್ಞಾನ ಪರೀಕ್ಷೆ, ವರದಿಗಳ ಪರಿಶೀಲನೆ ಎಲ್ಲಾ ಮುಗಿದ ನಂತರ ಸಂಬಂಧಪಟ್ಟ ಕುಟುಂಬಗಳಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇಂದು ಸಂಜೆಯ ಹೊತ್ತಿಗೆ ಭಾರತಕ್ಕೆ ಕಳುಹಿಸುವ ಕಾರ್ಯ ನಡೆಯಲಿದ್ದು ಏರ್ ಇಂಡಿಯಾ ಮೂಲಕ ಹಸ್ತಾಂತರಿಸಲಾಗುವುದು. ಈ ನಿಟ್ಟಿನಲ್ಲಿ ದುಬೈ ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ಎಲ್ಲಾ ರೀತಿಯಲ್ಲಿ ನೆರವು ನೀಡಿದ್ದಾರೆ ಎಂದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ