ದುಬೈ, ಜೂ.8: ಒಮಾನ್ ನಿಂದ ದುಬೈಗೆ ಆಗಮಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಮೃತಪಟ್ಟ 12 ಭಾರತೀಯರನ್ನು ಭಾರತದಲ್ಲಿ ಅವರ ಕುಟುಂಬಕ್ಕೆ ಹಸ್ತಾಂತರಿಸುವ ಮುನ್ನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಕಾರ್ಯದಲ್ಲಿ ದುಬೈಯಲ್ಲಿರುವ ಭಾರತೀಯ ದೂತಾವಾಸ ಕಚೇರಿ ನಿರತವಾಗಿದೆ.
ಒಮಾನ್ ರಾಜಧಾನಿ ಮಸ್ಕತ್ ನಿಂದ ದುಬೈಗೆ ಈದುಲ್ ಫಿತ್ವ್ ರ್ ರಜೆಯಲ್ಲಿ ಹಬ್ಬ ಮುಗಿಸಿಕೊಂಡು ಪ್ರಯಾಣಿಕರು ವಾಪಸ್ಸಾಗುತ್ತಿದ್ದ ವೇಳೆ ಬಸ್ ರಾಶಿದಿಯಾ ಮೆಟ್ರೊ ನಿಲ್ದಾಣದ ಹತ್ತಿರ ರಸ್ತೆಯೊಂದನ್ನು ತಪ್ಪಾಗಿ ಪ್ರವೇಶಿಸಿದ ಸಂದರ್ಭದಲ್ಲಿ ಕಳೆದ ಗುರುವಾರ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದುಬೈಯ ವಿಧಿವಿಜ್ಞಾನ ಪ್ರಯೋಗಾಲಯ 11 ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದ್ದು ಇನ್ನೊಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಅಧಿಕಾರಿಗಳಿಂದ ಇನ್ನೂ ಸಿಗಬೇಕಿದೆ ಎಂದು ದುಬೈಯಲ್ಲಿರುವ ಭಾರತೀಯ ಕೌನ್ಸಲ್ ಜನರಲ್ ವಿಪುಲ್ ಟ್ವೀಟ್ ಮಾಡಿದ್ದಾರೆ.
ಈ ವಿಧಿವಿಜ್ಞಾನ ಪರೀಕ್ಷೆ, ವರದಿಗಳ ಪರಿಶೀಲನೆ ಎಲ್ಲಾ ಮುಗಿದ ನಂತರ ಸಂಬಂಧಪಟ್ಟ ಕುಟುಂಬಗಳಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇಂದು ಸಂಜೆಯ ಹೊತ್ತಿಗೆ ಭಾರತಕ್ಕೆ ಕಳುಹಿಸುವ ಕಾರ್ಯ ನಡೆಯಲಿದ್ದು ಏರ್ ಇಂಡಿಯಾ ಮೂಲಕ ಹಸ್ತಾಂತರಿಸಲಾಗುವುದು. ಈ ನಿಟ್ಟಿನಲ್ಲಿ ದುಬೈ ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ಎಲ್ಲಾ ರೀತಿಯಲ್ಲಿ ನೆರವು ನೀಡಿದ್ದಾರೆ ಎಂದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ