ಯಾದಗಿರಿ: ಜನರ ಪಾಲಿಗೆ ರಾಜ್ಯ ಸರ್ಕಾರ ಸತ್ತಾಂಗಿದೆ. ಈ ಸರ್ಕಾರ ಯಾವಾಗ ತೊಲಗುತ್ತದೆ ಎಂದು ಜನತೆ ಎದುರು ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಯಾದಗಿರಿ ಮತಕ್ಷೇತ್ರದ ಅನವಾರ ಗ್ರಾಮದಲ್ಲಿ ಜನರಿಂದ ಅಹವಾಲು ಆಲಿಸಿ ಮಾತನಾಡಿದರು.ಗ್ರಾಮದಲ್ಲಿ ಆರು ತಿಂಗಳಿಂದ ಅಂಗವಿಕಲರಿಗೆ, ವೃದ್ಧರಿಗೆ, ವಿಧವಾ ವೇತನ ನೀಡಿಲ್ಲ. ಹೀಗಾಗಿ ಜನರಿಗೆ ಈ ಸರ್ಕಾರ ಇದ್ದು, ಇಲ್ಲದಂತಾಗಿದೆ ಎಂದರು.ಈ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಜನರ ತೆರಿಗೆ ಹಣ ಪೋಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಹಣ ನೀಡಿಲ್ಲ ಎಂದು ದೂರಿದರು.
ವಿಧಾನಸೌಧ ಮುಂದೆ ಧರಣಿ:ಎರಡು ಮೂರು ದಿನಗಳಲ್ಲಿ ವಿಧಾನಸೌಧ ಬಳಿ ಬಿಜೆಪಿ ಸಂಸದರು, ಶಾಸಕರೊಂದಿಗೆ ರಾಜ್ಯ ಸರ್ಕಾರ ವಿರುದ್ಧ ಧರಣಿ ನಡೆಸಲಾಗುವುದು. ತಕ್ಷಣ ರಾಜ್ಯ ಸರ್ಕಾರ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಯಡಿಯೂರಪ್ಪ ಅವರು ಒತ್ತಾಯಿಸಿದರು.ಒಂದು ವರ್ಷ ಕಳೆದರೂ ಸಾಲಮನ್ನಾ ಆಗಿಲ್ಲ. ಪಿಂಚಣಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ